ಬೆಂಗಳೂರು: ಕೊರೋನಾ ಸಂಕಷ್ಟ ಮಕ್ಕಳ ಶಿಕ್ಷಣದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5,6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂವೇದ ಇ-ತರಗತಿ ಕಲಿಕೆಯನ್ನು ಆರಂಭ ಮಾಡಲು ಮುಂದಾಗಿದೆ.
ನವೆಂಬರ್ 23 ರಿಂದ ತೊಡಗಿದಂತೆ ದೂರದರ್ಶನ ಚಂದನದಲ್ಲಿ ಸಂವೇದ ಇ – ಕ್ಲಾಸ್ ಆರಂಭಿಸುವ ಸೂಚನೆಯನ್ನು ಸರ್ಕಾರ ನೀಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳನ್ನು ಪ್ರಸಾರ ಮಾಡಲು ಸರ್ಕಾರ ಎಲ್ಲಾ ರೀತಿಯ ಪೂರಕ ಸಿದ್ಧತೆಗಳನ್ನು ಕೈಗೊಂಡಿದೆ.
ಬೆಳಗ್ಗೆ 8-9.30, ಸಂಜೆ 5.30-6 ಗಂಟೆತ ವರೆಗೆ ಪ್ರತಿನಿತ್ಯ 4 ಪಾಠಗಳನ್ನು 30 ನಿಮಿಷಗಳ ತರಗತಿಯಂತೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. 5, 6 ಮತ್ತು 7 ನೇ ತರಗತಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ತರಗತಿಗಳನ್ನು ವಿಡಿಯೋ ತರಗತಿಗಳ ಮೂಲಕ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.