ನವದೆಹಲಿ: ಈಶಾನ್ಯ ಪ್ರದೇಶದ ಸಂಪರ್ಕವನ್ನು ಉತ್ತೇಜಿಸುವಲ್ಲಿ ಮಹತ್ವದ ಕಾರ್ಯಗಳು ನಡೆಯುತ್ತಿವೆ, ಭಾರತದ ಅತಿ ಉದ್ದದ ರಸ್ತೆ ಸೇತುವೆಗಳಲ್ಲಿ ಒಂದು ಅಸ್ಸಾಂ ಮತ್ತು ಮೇಘಾಲಯದ ನಡುವೆ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಗಲು ಸಿದ್ಧವಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಮೂಲಸೌಕರ್ಯ ವಲಯದ ದಿಗ್ಗಜ ಲಾರ್ಸೆನ್ ಮತ್ತು ಟೌಬ್ರೊ (ಎಲ್ & ಟಿ) 3,200 ಕೋಟಿ ರೂ. ವೆಚ್ಚದಲ್ಲಿ 18 ಕಿಲೋಮೀಟರ್ ಉದ್ದದ ಕಾರ್ಯತಾಂತ್ರಿಕ ಸೇತುವೆಯನ್ನು ನಿರ್ಮಾಣ ಮಾಡಿಕೊಡಲಿದೆ ಎಂದು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ಸೋಮವಾರ ಹೇಳಿದೆ.
ನಾಲ್ಕು ಪಥಗಳ ಸೇತುವೆ ಧುಬ್ರಿಯಿಂದ ಫುಲ್ಬರಿಯವರೆಗೆ ರಾಷ್ಟ್ರೀಯ ಹೆದ್ದಾರಿ 127 ಬಿ ಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಗಲಿದೆ. ಇದು ಎರಡು ಪ್ರದೇಶಗಳ ನಡುವಿನ ಅಂತರವನ್ನು ಸುಮಾರು 203 ಕಿಲೋಮೀಟರ್ ಕಡಿಮೆ ಮಾಡಿ, ಪ್ರಯಾಣದ ಸಮಯವನ್ನು ದೊಡ್ಡ ಮಟ್ಟದಲ್ಲಿ ಉಳಿಸುತ್ತದೆ ಎಂದು ಹೇಳಲಾಗಿದೆ.
ಈ ಯೋಜನೆಯು ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಹೂಡಿಕೆ ಮಾಡಲು ಭಾರತ ಮತ್ತು ಜಪಾನ್ ನಡುವೆ ನಿರಂತರ ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ, ಏಕೆಂದರೆ ಇದಕ್ಕೆ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (ಜಿಕಾ) ಹಣಕಾಸು ನೆರವು ನೀಡುತ್ತಿದೆ. ಇದು ಮುಂಬೈ ಮತ್ತು ಅಹ್ಮದಾಬಾದ್ ನಡುವಣ 500 ಕಿ.ಮೀ ಉದ್ದದ ಬುಲೆಟ್ ರೈಲು ಯೋಜನೆಗೂ ಕೂಡ ಹಣಕಾಸು ಒದಗಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.