ಬೆಂಗಳೂರು: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಲಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆಗೂ ಮೊದಲೇ ಸಂಪುಟ ವಿಸ್ತರಣೆ ನಡೆಯುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಹಿಂದೆಯೂ ದೆಹಲಿ ಪ್ರವಾಸ ಮಾಡಿ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ ಕಾರಣಾಂತರಗಳಿಂದ ಸಂಪುಟ ವಿಸ್ತರಣೆ ಯಾ ಪುನಾರಚನೆ ಮುಂದೂಡಲ್ಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಇಂದು ಹೈಕಮಾಂಡ್ ಮತ್ತು ಯಡಿಯೂರಪ್ಪ ಭೇಟಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಯಡಿಯೂರಪ್ಪ ಇಂದು ಬೆಳಗ್ಗೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರು ಸಂಪುಟ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯಲ್ಲಿ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದರ ಬಗ್ಗೆ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿ, ಹೈಕಮಾಂಡ್ ಸೂಚಿಸಿದಂತೆ ಮುಂದಿನ ಹೆಜ್ಜೆ ಇಡಲಿರುವುದಾಗಿಯೂ ಬಲ್ಲ ಮೂಲಗಳು ತಿಳಿಸಿವೆ. ಜೊತೆಗೆ ಈ ಭೇಟಿಯಲ್ಲಿ ಖಾತೆ ಹಂಚಿಕೆಯ ಪಟ್ಟಿಯನ್ನೂ ಅಂತಿಮಗೊಳಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.