ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಜಂಕ್ಷನ್ ರೈಲು ನಿಲ್ದಾಣವು ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಎಂದು ಅಧಿಕೃತವಾಗಿ ನಾಮಕರಣಗೊಂಡಿದ್ದು, ಕೇಂದ್ರ ರೈಲ್ವೆ ಸಚಿವರಾದ ಪಿಯುಷ್ ಗೋಯಲ್ ಅವರು ಟ್ವೀಟ್ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಅನ್ನು ಹೊರಡಿಸಿದೆ.
ಈ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೇವರೆಂದೇ ಪ್ರಖ್ಯಾತಿ ಪಡೆದಿದ್ದ ಶ್ರೀ ಸಿದ್ಧಾರೂಢ ಸ್ವಾಮೀಜಿಗಳ ಹೆಸರನ್ನಿಟ್ಟು ಮರುನಾಮಕರಣ ಮಾಡುವುದು ಇಲ್ಲಿನ ಜನರ ಮುಖ್ಯ ಕನಸಾಗಿತ್ತು. ಇದೀಗ ರಾಜ್ಯ ಸರ್ಕಾರದಿಂದಲೂ ಈ ಸಂಬಂಧ ಗೆಜೆಟ್ ನೋಟಿಫಿಕೇಶನ್ ಬಿಡುಗಡೆಯಾಗಿದ್ದು, ಆ ಮೂಲಕ ಭಕ್ತರಿಗೆ ಸಂತಸ ನೀಡಿದೆ ಎಂದೇ ಹೇಳಬಹುದಾಗಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರ ಸ್ಪೆಲ್ಲಿಂಗ್ ಗೆಜೆಟ್ ಹೊರಡಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರವೂ ಸಮ್ಮತಿ ವ್ಯಕ್ತಪಡಿಸಿದೆ.
ಇನ್ನು ಈ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರನ್ನಿರಿಸಬೇಕು ಎಂಬ ಕೂಗು ಅವರ ಭಕ್ತ ಸಾಗರದಿಂದ ದಶಕಗಳಿಂದ ಕೇಳಿ ಬರುತ್ತಿತ್ತು. ಇದೀಗ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಒಮ್ಮತದಿಂದ ಹೆಸರು ಬದಲಾವಣೆಗೆ ಒಪ್ಪಿಗೆ ನೀಡಿರುವುದು ಭಕ್ತರಲ್ಲಿನ ಸಂತಸವನ್ನು ಮತ್ತಷ್ಟು ಹೆಚ್ಚಿಸಿದೆ.
Fulfilling the long-standing demand of the people of Karnataka, Hubballi Station will now be known as Shree Siddharoodha Swamiji Railway Station.
Swamiji was a great sage who preached universal brotherhood & inspired many followers on the path to spiritual awakening. pic.twitter.com/TYHdAPnxTi
— Piyush Goyal (@PiyushGoyal) November 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.