ಧಾರವಾಡ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರಜೆ ರಹಿತವಾಗಿ ಕೆಲಸ ನಿರ್ವಹಿಸಿ ರೋಗಿಗಳ ಸೇವೆ, ಜೊತೆಗೆ ತಮಗೆ ಬಂದ ವೇತನವನ್ನು ಸಹ ದಾನ ನೀಡುವ ಮೂಲಕ ಸರ್ಕಾರಿ ಆಸ್ಪತ್ರೆಯ ಆಯುಷ್ ವೈದ್ಯ ಕಮಲಾಪುರದ ಡಾ. ಮಯೂರೇಶ್ ಲೋಹಾರ ಅವರು ಮಾದರಿಯಾಗಿದ್ದಾರೆ.
ಕೆಲಸಕ್ಕೆ ಸೇರಿದ ಮೂರೇ ತಿಂಗಳಲ್ಲಿ ಒಂದೇ ಒಂದು ರಜೆಯನ್ನೂ ಪಡೆಯದೆ ಕೊರೋನಾ ಸೋಂಕಿತರ ಸೇವೆಯನ್ನು ಮಾಡಿದ್ದಲ್ಲದೆ, ಈ ಅವಧಿಯಲ್ಲಿ ತಮಗೆ ಬಂದ ಸಂಬಳವನ್ನು ಸಹ ಬಡವರಿಗೆ ಮಾಸ್ಕ್ ವಿತರಣೆಗೆ ಬಳಕೆ ಮಾಡುವ ಮೂಲಕ ಮಯೂರೇಶ್ ಮಾದರಿಯಾಗಿದ್ದಾರೆ. ಕಳೆದ ಮೂರೂವರೆ ತಿಂಗಳ ಹಿಂದಷ್ಟೇ ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇರಿರುವ ಇವರು ತಮ್ಮ ಮಾನವೀಯ ಗುಣಗಳ ಮೂಲಕವೇ ಇದೀಗ ಸುದ್ದಿಯಾಗಿದ್ದಾರೆ.
ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಒಂದೇ ಒಂದು ದಿನ ರಜೆ ಪಡೆಯದೇ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಈ ಹಿಂದೆಯೂ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ತಮ್ಮ ಸ್ನೇಹಿತರ ಸಹಕಾರದೊಂದಿಗೆ 1 ಲಕ್ಷ ರೂ. ಗಳನ್ನು ಸಂಗ್ರಹಿಸಿ ನೀಡುವ ಮೂಲಕ ಮಾದರಿಯಾಗಿದ್ದರು. ಸದ್ಯ ತಮಗೆ ಬಂದ ವೇತನದಿಂದ ಸುಮಾರು 10 ಸಾವಿರಕ್ಕೂ ಅಧಿಕ ಮಾಸ್ಕ್ಗಳನ್ನು ಖರೀದಿಸಿ, ಅದನ್ನು ತಮ್ಮ ಸ್ನೇಹಿತ ಬಳಗದ ಮೂಲಕ ಬಡವರಿಗೆ ವಿತರಿಸಿ ಮಾದರಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.