ಬೆಂಗಳೂರು: ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಯ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿದೆ. ಪರೀಕ್ಷೆ ಮುಂದೂಡಿ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಎರಡೂ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ಸಮಯದಲ್ಲಿ ನಿಗದಿಪಡಿಸಲಾಗಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸಂಕಷ್ಟ ಅನುಭವಿಸುವಂತಾಗಿತ್ತು. ಯಾವ ಪರೀಕ್ಷೆ ಬರೆಯುವುದು, ಯಾವುದಕ್ಕೆ ತಯಾರಿ ಮಾಡಿಕೊಳ್ಳುವುದು ಮೊದಲಾದ ವಿಚಾರಗಳಿಗೆ ಪರೀಕ್ಷಾರ್ಥಿಗಳಿಗೆ ಗೊಂದಲ ಉಂಟಾಗಿತ್ತು. ಈ ವಿಚಾರ ಗಮನಕ್ಕೆ ಬಂದ ತಕ್ಷಣವೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಪರೀಕ್ಷೆಗಳನ್ನು ಮುಂದೂಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಎರಡೂ ಪರೀಕ್ಷೆಗಳಿಗೆ ನಡೆಸಬೇಕಾದ ತಯಾರಿ ಬೇರೆ ಬೇರೆ ರೀತಿಯದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ರೀತಿಯಲ್ಲಿ ಎಚ್ಚರ ವಹಿಸಿ ವೇಳಾಪಟ್ಟಿಯನ್ನುನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಸರ್ಕಾರದ ಗಮನಕ್ಕೆ ತಂದಿದ್ದರು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಇದೀಗ ವೇಳಾಪಟ್ಟಿಯನ್ನು ಸಹ ಬದಲಾವಣೆ ಮಾಡಿದೆ. ಹೊಸ ವೇಳಾಪಟ್ಟಿಯ ಅನ್ವಯ ಕೆಪಿಎಸ್ಸಿ ಪರೀಕ್ಷೆ 2021 ರ ಫೆ. 13- 16 ರ ವರೆಗೆ ಮತ್ತು ಯುಪಿಎಸ್ಸಿ ಪರೀಕ್ಷೆಗಳು 2021 ಜ. 8- 10 ಮತ್ತು ಜ. 16-17 ಕ್ಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.