ರಾಯಚೂರು: ಮಂತ್ರಾಲಯದ ತುಂಗಭದ್ರಾ ಪುಷ್ಕರ ಮಹೋತ್ಸವಕ್ಕೆ ರಾಘವೇಂದ್ರ ಮಠದ ಪೀಠಾಧಿಪತಿ ಸುಬುದೇಂದ್ರ ತೀರ್ಥ ಮಹಾಸ್ವಾಮಿಗಳು ಇಂದು ಚಾಲನೆ ನೀಡಿದರು.
ತುಂಗಭದ್ರಾ ನದಿಯ ದಡದಲ್ಲಿ ಉತ್ಸವ ಮೂರ್ತಿಗೆ ಸುಬುದೇಂದ್ರರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಆ ಬಳಿಕ ತುಂಗಾ ತಟದಲ್ಲಿ ಮಠದ ವತಿಯಿಂದ ನಿರ್ಮಿಸಲಾಗಿರುವ ತುಂಗಭದ್ರಾ ತಾಯಿಯ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ. ಆ ಬಳಿಕ ನದಿಗೆ ಪೂಜೆ ಸಲ್ಲಿಸಿ, ದಂಡೋದಗ ಸ್ನಾನ ಮೂಲಕ ಪುಷ್ಕರಕ್ಕೆ ಚಾಲನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಈ ಬಾರಿ ತುಂಗಾ ತೀರದಲ್ಲಿ ಎಲ್ಲಾ ರೀತಿಯ ಸವಲತ್ತುಗಳನ್ನು ಒಳಗೊಂಡ ಸ್ನಾನ ಘಟ್ಟವನ್ನೂ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ಕೆ ಇನ್ಫೋಸಿಸ್ ಸಂಸ್ಥೆ 13 ಕೋಟಿ ರೂ. ಗಳನ್ನು ದೇಣಿಗೆ ನೀಡಿದೆ. ಇದನ್ನು ಬಳಸಿ ತುಂಗಭದ್ರಾ ನದಿಯ ತೀರದಲ್ಲಿ ಸ್ನಾನ ಘಟ್ಟ ನಿರ್ಮಾಣ ಮಾಡಿರುವುದಾಗಿಯೂ ಮೂಲಗಳು ತಿಳಿಸಿವೆ. ಕೊರೋನಾ ನಿಯಮಗಳನ್ನು ಪಾಲಿಸಿಕೊಂಡು ಈ ಪುಷ್ಕರ ಮಹೋತ್ಸವ ನಡೆಸಲಾಗುತ್ತಿದೆ ಎಂದು ಮಂತ್ರಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.