ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ 2017-18 ನೇ ಸಾಲಿನಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುವ 237 ಪೊಲೀಸ್ ಸಿಬ್ಬಂದಿಗಳಿಗೆ ಇಂದು ಪದಕ ಪ್ರದಾನ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಿತು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಲಾಖೆಯಲ್ಲಿ ಪ್ರಾಣದ ಹಂಗು ತೊರೆದು, ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ, ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿ ಪ್ರಶಸ್ತಿಗೆ ಭಾಜನರಾದ ಇಲಾಖೆಯ ಸಿಬ್ಬಂದಿಗಳಿಗೆ ಪದಕ ಪ್ರದಾನಿಸಿ ಗೌರವಿಸಿದರು. ಜೊತೆಗೆ ಪದಕ ಪಡೆದ ಸಿಬ್ಬಂದಿಗಳಿಗೆ ತಲಾ 10 ಸಾವಿರ ರೂ. ಬಹುಮಾನವನ್ನು ಸೇವೆಗೆ ಮೆಚ್ಚಿ ನೀಡುವುದಾಗಿಯೂ ಇದೇ ಸಂದರ್ಭದಲ್ಲಿ ಘೋಷಿಸಿದರು.
ದೇಶದಲ್ಲೇ ಕರ್ನಾಟಕ ಪೊಲೀಸ್ ಇಲಾಖೆಯ ದಕ್ಷತೆ, ಕಾರ್ಯ ವೈಖರಿ, ವಿಶ್ವಾಸಾರ್ಹತೆಗೆ ಒಳ್ಳೆಯ ಹೆಸರಿದೆ. ಸಮಾಜಕ್ಕೆ ಕಂಟಕವಾದ ಶಕ್ತಿಗಳನ್ನು ಹತ್ತಿಕ್ಕುವಲ್ಲಿ ಪೊಲೀಸರ ಪಾತ್ರ ಬಹಳ ಪ್ರಮುಖವಾದದ್ದು. ಅವರ ಕರ್ತವ್ಯ ನಿಷ್ಠೆ, ದಕ್ಷತೆ ಶ್ಲಾಘನೀಯ ಎಂದು ತಿಳಿಸಿದರು. ಜೊತೆಗೆ ಪ್ರಾಮಾಣಿಕ ಕಾರ್ಯಕ್ಕೆ ಸರ್ಕಾರ ಸದಾ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು. ಪೊಲೀಸರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇಂದು ನಡೆದ 2017 ಹಾಗೂ 2018 ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರಧಾನ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ವಿಜೇತ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪದಕ ಪ್ರಧಾನ ಮಾಡಿದರು. @CMofKarnataka @BSYBJP pic.twitter.com/kujyH1wkiy
— Basavaraj S Bommai (@BSBommai) November 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.