ಬೀದರ್: ರಾಜ್ಯದ ಹಿಂದುಳಿದ ಗ್ರಾಮಗಳ ಅಭಿವೃದ್ಧಿಯ ಹಿನ್ನೆಲೆಯಲ್ಲಿ ‘ಸುವರ್ಣ ಗ್ರಾಮ’ ಯೋಜನೆಯನ್ನು ಮತ್ತೆ ಆರಂಭಿಸುವ ಸಲುವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಬಸವಕಲ್ಯಾಣದ ಕೌಡಿಯಾಳ ಸಮೀಪದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಬಾರಿಯ ಬಜೆಟ್ನಲ್ಲಿ 4000 ಗಳಷ್ಟು ಹೊಸ ಬಸ್ಸುಗಳ ಖರೀದಿಗೆ ಸಂಬಂಧಿಸಿದಂತೆ ಘೋಷಿಸಲಾಗಿತ್ತು. ಆದರೆ ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಯೋಜನೆಯ ಸಮರ್ಪಕ ಜಾರಿ ಸಾಧ್ಯವಾಗಿಲ್ಲ. ಬಸವಕಲ್ಯಾಣ ಭಾಗಕ್ಕೆ 1000 ಹೊಸ ಬಸ್ ಒದಗಿಸುವ ಗುರಿಯನ್ನು ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದು ಸವದಿ ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ದೇಶದ ಇತರ ಕೆಲವು ರಾಜ್ಯಗಳು ಸಾರಿಗೆ ನೌಕರರ ವೇತನವನ್ನು ಕಡಿಮೆಗೊಳಿಸಿವೆ. ಆದರೆ ರಾಜ್ಯದ ಸಾರಿಗೆ ನೌಕರರಿಗೆ ಈ ಹಿಂದಿನಂತೆಯೇ ಸಂಪೂರ್ಣ ವೇತನವನ್ನು ಒದಗಿಸಲಾಗಿದೆ. ಬಸ್ಸುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವೇ ಸಾರಿಗೆ ನೌಕರರಿಗೆ ವೇತನ ವಿತರಣೆ ಮಾಡುವ ಮೂಲಕ ಮಾದರಿಯಾಗಿದೆ ಎಂದು ಸವದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.