ಕಲ್ಬುರ್ಗಿ: ಗುಲ್ಬರ್ಗ ವಿಶ್ವವಿದ್ಯಾಲಯದ 38 ನೇ ಘಟಿಕೋತ್ಸವದಲ್ಲಿ ಆಳಂದ ತಾಲೂಕಿನ ಮಡ್ಯಾಳ ಗ್ರಾಮದ ವಿದ್ಯಾರ್ಥಿನಿ ಜಯಶ್ರೀ ಎಂಬವರು 11 ಚಿನ್ನದ ಪದಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಮೂಲತಃ ಕೃಷಿ ಕುಟುಂಬದಿಂದ ಬಂದ ಜಯಶ್ರೀ ಕನ್ನಡ ಎಂ. ಎ. ಸ್ನಾತಕೋತ್ತರ ಪದವಿಯಲ್ಲಿ 11 ಚಿನ್ನದ ಪದಕದ ಮತ್ತು ಪ್ರಮಾಣ ಪತ್ರಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಆ ಮೂಲಕ ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಹೊಂದಿದ್ದರೆ ಸಾಧನೆ ಸುಲಭ ಎಂಬುದನ್ನು ಜಯಶ್ರೀ ಶಿವಶರಣಪ್ಪ ಯಳಸಂಗಿ ತಮ್ಮ ಸಾಧನೆಯ ಮೂಲಕವೇ ತೋರಿಸಿಕೊಟ್ಟಿದ್ದಾರೆ.
ತಂದೆ, ತಾಯಿ, ಇಬ್ಬರು ತಮ್ಮಂದಿರು, ಮೂವರು ತಂಗಿಯಂದಿರನ್ನು ಹೊಂದಿರುವ ಇವರದ್ದು ಕೃಷಿ ಪ್ರಧಾನ ಕುಟುಂಬ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಡ್ಯಾಳ, ಪ್ರೌಢ, ಪದವಿ ಶಿಕ್ಷಣಗಳನ್ನು ಆಳಂದದಲ್ಲಿ ಮುಗಿಸಿರುವ ಇವರು ಸದ್ಯ ಗುಲ್ಬರ್ಗ ವಿವಿಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತಮ್ಮ ಈ ಸಾಧನೆಗೆ ಕಾರಣರಾದ ಹೆತ್ತವರು, ಶಿಕ್ಷಕರು ಮತ್ತು ಗೆಳೆಯರಿಗೆ ಇದೇ ಸಂದರ್ಭದಲ್ಲಿ ಧನ್ಯವಾದ ಸಮರ್ಪಿಸಿದ್ದಾರೆ. ಇವರೆಲ್ಲರ ಸಹಕಾರದಿಂದಲೇ ತಾವು ಈ ಸಾಧನೆ ಮಾಡುವುದು ಸಾಧ್ಯವಾಗಿದೆ ಎಂದು ಜಯಶ್ರೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.