ಬೆಂಗಳೂರು: ಡಿ. 5ರಂದು ಬಂದ್ಗೆ ಕರೆ ನೀಡಿರುವ ಸಂಘಟನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬಲವಂತವಾಗಿ ಬಂದ್ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲವಂತದ ಬಂದ್ಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಕನ್ನಡದ ಪರವಾಗಿ, ಕನ್ನಡದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯ ಸೌಲಭ್ಯ, ಸೌಕರ್ಯಗಳನ್ನು ಒದಗಿಸಲು ಸಿದ್ಧವಿದೆ. ಬೇರೆ ಕಾರಣಗಳಿಗಾಗಿ ಬಂದ್ಗೆ ಕರೆ ನೀಡುವುದು ಸರಿಯಾದ ಕ್ರಮವಲ್ಲ. ಬಲವಂತದ ಬಂದ್ಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆಗೆ ಮುಂದಾದವರು ಪ್ರತಿಕೃತಿ ದಹನ ಸೇರಿದಂತೆ, ಇನ್ನಿತರ ತಪ್ಪು ಕ್ರಮಗಳನ್ನು ಅನುಸರಿಸುವುದು ಕಂಡುಬರುತ್ತಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಶಾಂತಿಯುತ ಪ್ರತಿಭಟನೆಯನ್ನು ಮಾಡಲಿ. ಆದರೆ ಪ್ರತಿಭಟನೆಗೆ ಉಗ್ರ ಸ್ವರೂಪಗಳನ್ನು ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಸರ್ಕಾರ ಎಲ್ಲಾ ವರ್ಗಗಳಿಗೂ ಸಮಾನ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ಉದ್ದೇಶ ಅರಿತು ಒಳ್ಳೆಯ ಕೆಲಸಗಳಿಗೆ ಬೆಂಬಲಿಸುವಂತೆಯೂ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.