ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ 2019 ರ ವಾರ್ಷಿಕ ಪ್ರಶಸ್ತಿ ಪ್ರದಾನ, 2014-17 ರ ವರೆಗಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಜಾನಪದ ತಜ್ಞ ಪ್ರಶಸ್ತಿ ಪುರಸ್ಕಾರವನ್ನು ಇಬ್ಬರು ತಜ್ಞ ಸಾಧಕರಿಗೆ ನೀಡಿ ಗೌರವಿಸಲಾಯಿತು. ಹಾಗೆಯೇ 2014-18ರ ವರೆಗೆ ಜಾನಪದ ಪ್ರಕಾರಗಳ ಬಗ್ಗೆ ಸಂಶೋಧನೆ ನಡೆಸಿ ಪುಸ್ತಕಗಳನ್ನು ಪ್ರಕಟಿಸಿರುವ ಎಂಟು ಜನರಿಗೆ ಪುಸ್ತಕ ಬಹುಮಾನ, ಜನಪದ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮೆರೆದಿರುವ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 30 ಮಂದಿ ಸಾಧಕರಿಗೆ 2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಗೌರವ ಪ್ರಶಸ್ತಿಯು 25 ಸಾವಿರ ರೂ. ಗಳು ಮತ್ತು ಕ್ಷೇತ್ರ ತಜ್ಞರಿಗೆ 50 ಸಾವಿರ ರೂ. ಪ್ರಶಸ್ತಿ ಮೊತ್ತವನ್ನು ಒಳಗೊಂಡಿದೆ.
ಅಧ್ಯಕ್ಷತೆಯನ್ನು ಮಾತಾ ಬಿ ಮಂಜಮ್ಮ ಜೋಗತಿ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ಬೋರಲಿಂಗಯ್ಯ, ರಶ್ಮಿ, ಮಹೇಶ್,ಎಸ್ ರಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.
ಜನಪದ ಗಾಯನ, ಜನಪದ ಕಲಾ ಪ್ರದರ್ಶನಗಳಾದ ಡೊಳ್ಳು ಕುಣಿತ, ವೀರಗಾಸೆ, ಕೋಲಾಟ, ಸಿಂಧೋಳ್ ಕುಣಿತ, ಪಟ ಕುಣಿತಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.