ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತದ ತೈಲ ಸಂಸ್ಕರಣಾ ಸಾಮರ್ಥ್ಯವನ್ನು ದ್ವಿಗುಣಗೊಳಿಸುವತ್ತ ಕಾರ್ಯ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
“ಮುಂದಿನ ಐದು ವರ್ಷಗಳಲ್ಲಿ ತೈಲ ಸಂಸ್ಕರಣಾ ಸಾಮರ್ಥ್ಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ, ಇಂಧನ ಸುರಕ್ಷತೆಗೆ ಸಂಬಂಧಿಸಿದ ಆರಂಭಿಕ ಪರಿಸರ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಮತ್ತು ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗಾಗಿ ಒಂದು ನಿಧಿಯನ್ನು ರಚಿಸಲಾಗಿದೆ” ಎಂದಿದ್ದಾರೆ.
ಅವರು ಗುಜರಾತಿನ ಗಾಂಧೀನಗರದಲ್ಲಿನ ಪಂಡಿತ್ ದೀನ್ದಯಾಳ್ ಪೆಟ್ರೋಲಿಯಂ ಯೂನಿವರ್ಸಿಟಿಯ 8ನೇ ಘಟಿಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದರು.
“ಇಂದು ಭಾರತದ ಇಂಧನ ಕ್ಷೇತ್ರವು ಬೆಳವಣಿಗೆ, ಉದ್ಯಮಶೀಲತೆ ಮತ್ತು ಉದ್ಯೋಗದ ಅಪಾರ ಸಾಮರ್ಥ್ಯವನ್ನು ಹೊಂದಿದೆ. ದೇಶವು ತನ್ನ ಇಂಗಾಲದ ಹೊರಸೂಸುವಿಕೆಯನ್ನು 30-35% ರಷ್ಟು ಕಡಿಮೆ ಮಾಡುವ ಗುರಿಯೊಂದಿಗೆ ಮುಂದುವರಿಯುತ್ತಿದೆ ಮತ್ತು ನೈಸರ್ಗಿಕ ಅನಿಲದ ಪಾಲನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ” ಎಂದಿದ್ದಾರೆ.
ಭಾರತವು ಎರಡನೇ ಅತಿದೊಡ್ಡ ಉಕ್ಕು ತಯಾರಕ ಮತ್ತು ಮೂರನೇ ಅತಿದೊಡ್ಡ ಇಂಧನ ಗ್ರಾಹಕ ಎಂದು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.