ಹಾಸನ: ದೊಡ್ಡಗದ್ದವಳ್ಳಿಯ ಮಹಾಲಕ್ಷ್ಮಿ ದೇಗುಲದ ಮಹಾಕಾಳಿ ವಿಗ್ರಹ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ಕೇಳಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಲು ಮುಂದಾಗಿವೆ. ಕಳೆದ ಗುರುವಾರ ರಾತ್ರಿ ಈ ಕುಕೃತ್ಯ ನಡೆದಿದ್ದು, ಮರುದಿನವೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ಆದರೆ ಇದೀಗ ಪ್ರಧಾನಿ ಕಾರ್ಯಾಲಯ ಈ ಸಂಬಂಧ ವರದಿ ಕೇಳಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ. ಆ ಮೂಲಕ ಈ ಘಟನೆಯನ್ನು ಮತ್ತಷ್ಟು ಗಂಭೀರವಾಗಿ ತನಿಖೆ ನಡೆಸಲು ಆರಂಭಿಸಿದ್ದಾರೆ.
ಘಟನೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ಮಾರಕವೂ ಆಗಿರುವ ಲಕ್ಷ್ಮೀ ದೇವಸ್ಥಾನದ ದ್ವಾರಕ್ಕೆ ಬೀಗ ಹಾಕಿರಲಿಲ್ಲ ಎಂಬ ವಿಚಾರವೂ ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ. ಜೊತೆಗೆ ಈ ವಿಗ್ರಹ ಈ ಹಿಂದೆಯೇ ಅಲುಗಾಡುತ್ತಿದೆ ಎಂಬುದನ್ನು ಅಲ್ಲಿನ ಅರ್ಚಕರು ತಿಳಿಸಿದಾಗಲೂ ಅದಕ್ಕೆ ಸಂಬಂಧಪಟ್ಟವರಿಂದ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಸದ್ಯ ಮೂರ್ತಿ ಆಕಸ್ಮಿಕವಾಗಿ ಭಗ್ನವಾಗಿದೆಯೇ ಅಥವಾ ಇನ್ನಾವುದಾದರೂ ಕಾರಣದಿಂದ ಯಾರಾದರೂ ಈ ದುಷ್ಕೃತ್ಯ ಎಸಗಿದ್ದಾರೆಯೇ ಎಂಬ ವಿಚಾರಗಳನ್ನಿಟ್ಟುಕೊಂಡು ಪೊಲೀಸ್ ಇಲಾಖೆ ಗಂಭೀರ ತನಿಖೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.