ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಹಂತದ ಅಲೆಯನ್ನು ತಪ್ಪಿಸಲು ಮುಂದಿನ ಎರಡು ತಿಂಗಳ ವರೆಗೆ ಕೋವಿಡ್ ಟೆಸ್ಟ್ ಮತ್ತು ಚಿಕಿತ್ಸೆಗಳಲ್ಲಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಅನುಸರಿಸಬೇಕಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸರಾಸರಿ 2335 ರಷ್ಟಿದೆ. ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಮೂರನೇ ಎರಡರಷ್ಟು ಕುಸಿತ ಕಂಡಿದೆ. ಅಕ್ಟೋಬರ್ 9 ರಂದು ದೇಶದಲ್ಲಿ 73,305 ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದರು. ಆದರೆ ಆ ಬಳಿಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಆದ್ದರಿಂದ ಮುಂದಿನ ಎರಡು ತಿಂಗಳುಗಳ ಕಾಲ ಕಠಿಣ ಎಚ್ಚರಿಕೆ ವಹಿಸಿದಲ್ಲಿ ಮಾತ್ರ ರಾಜ್ಯದಲ್ಲಿ ಕೊರೋನಾ ಎರಡನೇ ಹಂತದ ಅಲೆಯನ್ನು ತಡೆಯಬಹುದಾಗಿದೆ ಎಂದು ತಜ್ಞರ ಅಭಿಪ್ರಾಯ.
ದೇಶದಲ್ಲಿ ಕೊರೋನಾ ಪರಿಸ್ಥಿತಿ ಹತೋಟಿಗೆ ತರುವಲ್ಲಿ ವೈದ್ಯಕೀಯ ಸಿಬ್ಬಂದಿ, ಐಎಎಸ್ಅಧಿಕಾರಿಗಳು ಶ್ಲಾಘನೀಯ ಪಾತ್ರ ವಹಿಸುತ್ತಿದ್ದಾರೆ. ಕೊರೋನಾ ಸಂಕಷ್ಟದಿಂದ ವಿಶ್ವವೇ ಬದಲಾಗಿದೆ. ರಾಜ್ಯದಲ್ಲಿ ಮುಂದಿನ 5-6 ವಾರಗಳ ಕಾಲ ಕಠಿಣ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿದ್ದೇ ಆದಲ್ಲಿ ಕೊರೋನಾ ಅಲೆಯಿಂದ ಪಾರಾಗಲು ಸಾಧ್ಯ. ಇಲ್ಲವಾದರೆ ಇಂದು ದೆಹಲಿಗೆ ಬಂದೊದಗಿರುವ ಸ್ಥಿತಿ ಮುಂದೆ ರಾಜ್ಯಕ್ಕೂ ಬರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ಸರ್ಕಾರ, ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಸೋಂಕು ವ್ಯಾಪಿಸುವುದನ್ನು ತಡೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವಂತೆಯೂ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.