ನವದೆಹಲಿ: ದೇಶದಲ್ಲಿ ಆರ್ಥಿಕ ಸುಧಾರಣೆಗಳ ವೇಗವನ್ನು ಮುಂದುವರಿಸಲು ಸರ್ಕಾರ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಿಐಐ ಆಯೋಜಿಸಿದ್ದ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ಸುಧಾರಣೆಗಳ ವೇಗವು ಭಾರತವನ್ನು ಜಾಗತಿಕ ಹೂಡಿಕೆಯ ತಾಣವನ್ನಾಗಿ ಮಾಡುತ್ತದೆ. ಸಾಂಕ್ರಾಮಿಕದ ಈ ಸಮಯದಲ್ಲಿ ಆಳವಾದ ಸುಧಾರಣೆಗಳನ್ನು ತೆಗೆದುಕೊಳ್ಳುವ ಯಾವುದೇ ಅವಕಾಶವನ್ನು ಪ್ರಧಾನಿ ನರೇಂದ್ರ ಮೋದಿ ಕಳೆದುಕೊಂಡಿಲ್ಲ ಎಂದಿದ್ದಾರೆ.
ದಶಕಗಳಿಂದ ಬೆಳಕನ್ನೇ ಕಾಣದ ಸುಧಾರಣೆಗಳನ್ನು ಮೋದಿ ತೆಗೆದುಕೊಂಡಿದ್ದಾರೆ. ಹಣಕಾಸು ವಲಯವನ್ನು ವೃತ್ತಿಪರಗೊಳಿಸಲಾಗುತ್ತಿದೆ ಮತ್ತು ಹೂಡಿಕೆ ಮತ್ತು ಖಾಸಗೀಕರಣದ ಕಾರ್ಯಸೂಚಿಯನ್ನು ಸರ್ಕಾರ ಮುಂದುವರಿಸಲಿದೆ ಎಂದು ಅವರು ಹೇಳಿದ್ದಾರೆ.
ತೆರಿಗೆ ವ್ಯವಸ್ಥೆಯಲ್ಲಿನ ಸುಧಾರಣೆಗಳ ಕುರಿತು ಮಾತನಾಡಿದ ಅವರು, ಮುಖರಹಿತ ಮೌಲ್ಯಮಾಪನದಂತಹ ತಂತ್ರಜ್ಞಾನದ ಬಳಕೆಯು ತೆರಿಗೆ ಸಲ್ಲಿಸುವ ಪ್ರಕ್ರಿಯೆಯನ್ನು ಸರಾಗಗೊಳಿಸಿದೆ ಎಂದು ಹೇಳಿದರು.
ಕಾರ್ಪೊರೇಟ್ ತೆರಿಗೆಯ ಕಡಿತವು ಎಂಎನ್ಸಿಗಳು ಮತ್ತು ಯಾವುದೇ ದೊಡ್ಡ ಕಂಪನಿಗಳು ಅಥವಾ ಸಣ್ಣ ಕಂಪನಿಗಳಿಗೆ ತಕ್ಷಣದ ಪ್ರಯೋಜನಗಳನ್ನು ತೋರಿಸಬೇಕು ಎಂಬುದು ನಮ್ಮ ಉದ್ದೇಶ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.