ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಕೆ ನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗಸ್ತಿ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ಇಹಲೋಕ ತ್ಯಜಿಸಿದ್ದರು. ಇದರಿಂದಾಗಿ ತೆರವಾಗಿದ್ದ ರಾಜ್ಯಸಭಾ ಸದಸ್ಯ ಸ್ಥಾನದ ಚುನಾವಣೆಯನ್ನು ಡಿ 1 ರಂದು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು. ಬಿಜೆಪಿಯಿಂದ ಆರೆಸ್ಸೆಸ್ ಹಿನ್ನೆಲೆಯುಳ್ಳ, ಬಿಜೆಪಿಯ ಕಾರ್ಯಕರ್ತ ನಾರಾಯಣ್ ಅವರನ್ನು ಬಿಜೆಪಿ ಆಯ್ಕೆ ಮಾಡಿತ್ತು.
ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಸದಸ್ಯರ ಕೊರತೆಯ ಕಾರಣದಿಂದ ಈ ಬಾರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಚುನಾವಣೆ ಇಲ್ಲದೆಯೇ ಬಿಜೆಪಿ ಅಭ್ಯರ್ಥಿ ನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವ ಅವಧಿ ಕಳೆದ ಬಳಿಕ ಕುಟುಂಬ ಸಮೇತರಾಗಿ ಚುನಾವಣಾಧಿಕಾರಿಗಳ ಕಛೇರಿಗೆ ಆಗಮಿಸಿದ ನಾರಾಯಣ್ ಅವರು ಕಾರ್ಯದರ್ಶಿಗಳಿಂದ ಆಯ್ಕೆಯ ಪ್ರಮಾಣ ಪತ್ರ ಸ್ವೀಕರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.