ಬೆಂಗಳೂರು: ಗ್ರಾಮ ಪಂಚಾಯತ್ಗಳ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅಧಿಕ ಸಂಖ್ಯೆಯಲ್ಲಿ ವಿಜಯಿಗಳಾಗುವಂತೆ ಮಾಡುವ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಪಕ್ಷ ಸಿದ್ಧತೆ ನಡೆಸಿದೆ.
ಈ ಸಂಬಂಧ ಗ್ರಾಮ ಸ್ವರಾಜ್ಯ ಸಮಾವೇಶ ನಡೆದಿದ್ದು, ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.
ಗ್ರಾಮ ಪಂಚಾಯತ್ ಚುನಾವಣೆಯ ಭಾಗವಾಗಿ ಬಿಜೆಪಿಯು ಪಂಚರತ್ನ ಮತ್ತು ಪಂಚಸೂತ್ರ ಯೋಜನೆ ಗಳನ್ನು ಅಳವಡಿಸಿಕಳ್ಳಲಿದೆ ಎಂದು ಕಟೀಲ್ ಮಾಹಿತಿ ನೀಡಿದ್ದಾರೆ. ಪಂಚಸೂತ್ರದ ಅಡಿಯಲ್ಲಿ ವಾರ್ ರೂಂ ಗಳು ಕಾರ್ಯ ನಿರ್ವಹಿಸಲಿವೆ. ಜೊತೆಗೆ ಕುಟುಂಬ ಮಿಲನದಂತಹ ಕಾರ್ಯಕ್ರಮಗಳನ್ನು ಸಹ ಪಕ್ಷ ನಡೆಸಲಿದೆ. ರಾಜ್ಯದ ಹೆಚ್ಚಿನ ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಗಳಿಸುವಂತೆ ಮಾಡುವ ನಿಟ್ಟಿನಲ್ಲಿ ಪಕ್ಷವನ್ನು ಜನರೆಡಗೆ ತಲುಪಿಸುವ ಕೆಲಸವನ್ನು ಮಾಡುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ನಳಿನ್ ಮಾಹಿತಿ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಭಾಜಪದ ಸಾಮಾನ್ಯ ಕಾರ್ಯಕರ್ತರು ಸಹ ನಾಯಕರಾಗುವಂತೆ ಬೆಳೆಸಲಾಗುವುದು. ಈ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶಗಳನ್ನು ಜಿಲ್ಲೆಗೆ ಎರಡರಂತೆ ನಡೆಸಲು ಪಕ್ಷ ಯೋಜನೆಗಳನ್ನು ಹಾಕಿಕೊಂಡಿದೆ. ಈ ಬಾರಿ ಕೊರೋನಾ ನಿಯಮಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಮಾವೇಶ ನಡೆಸಲಾಗುವುದು ಎಂದು ಕಟೀಲ್ ಮಾಹಿತಿ ನೀಡಿದ್ದಾರೆ. ಜೊತೆಗೆ ಪಕ್ಷವನ್ನು ಜನರೆಡೆಗೆ ಮತ್ತಷ್ಟು ತಲುಪಿಸುವ ನಿಟ್ಟಿನಲ್ಲಿ 6 ತಂಡಗಳನ್ನು ಸಹ ಪಕ್ಷ ರಚಿಸಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಪಕ್ಷದಲ್ಲಿ ಜಾತ್ಯಾತೀತವಾಗಿ ಎಲ್ಲರಿಗೂ ಪ್ರಾತಿನಿಧ್ಯ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳನ್ನು ಜನರೆಡೆಗೆ ತಲುಪಿಸುವ ಕೆಲಸಗಳನ್ನು ಸಹ ಮಾಡುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.