ಲಕ್ನೋ: ಮದುವೆಯ ಹೆಸರಲ್ಲಿ ಬಲವಂತದ ಮತಾಂತರವನ್ನು ತಡೆಗಟ್ಟುವ ಸಲುವಾಗಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಮಂಗಳವಾರ ಕರಡು ಸುಗ್ರೀವಾಜ್ಞೆಗೆ ಅನುಮೋದನೆಯನ್ನು ನೀಡಿದೆ.
ವಿಶೇಷವೆಂದರೆ, ಈ ಸುಗ್ರೀವಾಜ್ಞೆ ಲವ್ ಜಿಹಾದ್ ಎಂಬ ಶಬ್ದವನ್ನು ಬಳಸಿಲ್ಲ. ಕರಡಿಗೆ ʼವಿಧಿ ವಿರುದ್ದ್ ಧರ್ಮಾಂತರನ್ 2020′ ಎಂದು ಹೆಸರಿಸಿದೆ.
ಮಂಗಳವಾರ ನಡೆದ ಸಂಪುಟ ಸಭೆ ಉದ್ದೇಶಿತ ಕರಡನ್ನು ಅಂಗೀಕರಿಸಿದೆ. ಮಸೂದೆಯನ್ನು ಮತಾಂತರ ವಿರೋಧಿ ಕಾನೂನು ಎಂದು ಪರಿಗಣಿಸಲಾಗಿದೆ ಮತ್ತು ಇದು ಜನರನ್ನು ಬಲವಂತವಾಗಿ, ಪ್ರೀತಿಯ ನೆಪದಲ್ಲಿ ಅಥವಾ ಬೆದರಿಕೆ ಹಾಕುವ ಮೂಲಕ ಇತರ ಧರ್ಮಗಳಿಗೆ ಪರಿವರ್ತಿಸುವುದನ್ನು ತಡೆಯುತ್ತದೆ.
“ಲವ್ ಜಿಹಾದ್ ಎಂಬ ಪದವನ್ನು ಮಸೂದೆಯಲ್ಲಿ ಬಳಸಲಾಗಿಲ್ಲ ಮತ್ತು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದ ಮತಾಂತರಗಳನ್ನು ಹೊಸ ಕಾನೂನಿನ ವ್ಯಾಪ್ತಿಗೆ ತರಲಾಗುವುದು. ನಿಖರವಾಗಿ ಹೇಳಬೇಕೆಂದರೆ, ಅದು ಕೇವಲ ಹಿಂದೂ-ಮುಸ್ಲಿಂ ಮತಾಂತರಗಳು ಅಥವಾ ವಿವಾಹದ ನಿರ್ದಿಷ್ಟ ಉದ್ದೇಶದ ಮತಾಂತರಗಳ ಬಗ್ಗೆ ಗಮನ ಹರಿಸಿಲ್ಲ” ಎಂದು ಕಾನೂನು ಆಯೋಗದ ಮುಖ್ಯಸ್ಥ ಜಸ್ಟಿಸ್ ಆದಿತ್ಯ ಮಿತ್ತಲ್ ಹೇಳಿದ್ದಾರೆ.
ಪ್ರಸ್ತಾವಿತ ಮಸೂದೆಯಲ್ಲಿ, ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗೆ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.