ಬೆಂಗಳೂರು: ರಾಜ್ಯದಲ್ಲಿ 15 ಕ್ಕೂ ಅಧಿಕ ನಿಗಮ, ಮಂಡಳಿಗಳು, ಪ್ರಾಧಿಕಾರ, ಸಮಿತಿಗಳಿಗೆ ಅಧ್ಯಕ್ಷರು, ಅಧಿಕಾರೇತರ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಂಪುಟ ವಿಸ್ತರಣೆ, ಪುನಾರಚನೆಗೂ ಮೊದಲೇ ನಿಗಮ, ಮಂಡಳಿ, ಪ್ರಾಧಿಕಾರ ಮೊದಲಾದವುಗಳಿಗೆ ಅಧ್ಯಕ್ಷರು, ಅಧಿಕಾರೇತರ ನಿರ್ದೇಶಕರನ್ನು ನೇಮಕ ಮಾಡಿರುವ ಸರ್ಕಾರದ ನಡೆ ಕುತೂಹಲಕ್ಕೂ ಕಾರಣವಾಗಿದೆ.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮಕ್ಕೆ ಎಸ್ ಐ ಚಿಕ್ಕನ ಗೌಡ್ರು, ಕೆಆರ್ಐಡಿಎಲ್ಗೆ ಎಂ ರುದ್ರೇಶ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪಟ್ಟ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರಿಗೆ ಒಲಿದಿದೆ. ಕವಿಕಾ ಅಧ್ಯಕ್ಷರಾಗಿ ತಮ್ಮೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಗೆ ಕಲ್ಬುರ್ಗಿ ಜಿಲ್ಲೆಯ ಲಿಂಗರೆಡ್ಡಿ ಗೌಡ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಗೆ ವಿಜಯ ಪುರದ ವಿಜು ಗೌಡ ಎಸ್ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ತಾರಾ ಅನುರಾಧ, ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಗೆ ಚಿಕ್ಕನಾಯಕನಹಳ್ಳಿಯ ಕಿರಣ್ ಕುಮಾರ್ ಕೆ ಎಸ್, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜವಾಬ್ದಾರಿಯನ್ನು ದುರ್ಯೋಧನ ಐಹೊಳೆ ಅವರಿಗೆ ವಹಿಸಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ಬಳ್ಳಾರಿಯ ಎಚ್ ಹನುಮಂತಪ್ಪ, ಎಂ ರಾಮಚಂದ್ರ ಚಾಮರಾಜನಗರ ಅವರಿಗೆ ಕೇಂದ್ರ ಪರಿಹಾರ ಸಮಿತಿಯ ಜವಾಬ್ದಾರಿ, ಕರ್ನಾಟಕ ಮೀನುಗಾರಿಕ ಅಭಿವೃದ್ಧಿ ನಿಗಮಕ್ಕೆ ನಿತಿನ್ ಕುಮಾರ್ ಮಂಗಳೂರು ಅವರನ್ನು ನೇಮಿಸಲಾಗಿದೆ. ಇವಿಷ್ಟೇ ಅಲ್ಲದೆ ಮೃಗಾಲಯ ಪ್ರಾಧಿಕಾರಕ್ಕೆ ಮೈಸೂರಿನ ಎಲ್ ಆರ್ ಮಹಾದೇವಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಸಿ.ಮುನಿಕೃಷ್ಣ, ರಘು ಆರ್ ಕೌಟಿಲ್ಯ ಅವರನ್ನು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬಾಬು ಪತ್ತಾರ್ ಅವರನ್ನು ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮ, ಜಿ ಕೆ ಗಿರೀಶ್ ಉಪ್ಪಾರ ಅವರನ್ನು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಎಸ್ ನರೇಶ್ ಕುಮಾರ್ ಅವರನ್ನು ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಪಿ.ರುದ್ರೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.