ನವದೆಹಲಿ: ಯುವಕರಿಗೆ ಆತ್ಮವಿಶ್ವಾಸ ಮತ್ತು ಆತ್ಮಾವಲೋಕನದ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಇತ್ತೀಚಿಗೆ ಜಾರಿಗೆ ತರಲಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ ಕೂಡ ಇದೆ ಆಗಿದೆ ಎಂದಿದ್ದಾರೆ.
ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರಂಭವನ್ನುವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಹಿಂದಿನ ಸರ್ಕಾರಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬರೇಲಿಯಲ್ಲಿನ ರೈಲು ಕೋಚ್ ಕಾರ್ಖಾನೆಯು ಕಾರ್ಯನಿರ್ವಹಣೆಯಲ್ಲಿ ದೋಷವನ್ನು ಹೊಂದಿತ್ತು, ಆದರೂ, ಸಂಸತ್ತಿನಲ್ಲಿ ರಾಯ್ ಬರೇಲಿಯನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ಸಿಗರು ಈ ಬಗ್ಗೆ ಗಮನವನ್ನೇ ನೀಡಿರಲಿಲ್ಲ ಎಂದಿದ್ದಾರೆ.
“ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದ್ದಾಗ ಒಬ್ಬರಲ್ಲಿ ಆತ್ಮವಿಶ್ವಾಸ ಬರುತ್ತದೆ. ಸರಪಳಿಯಲ್ಲಿ ಸುತ್ತಿದಂತಿರುವ ಮನಸ್ಸು ಮತ್ತು ದೇಹವು ಎಂದಿಗೂ ಉತ್ಪಾದಕತೆಯನ್ನು ಹೊಂದುವುದಿಲ್ಲ” ಎಂದು ಮೋದಿ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಮಗ್ರವಾಗಿ ಚರ್ಚಿಸಲು ಮತ್ತು ಅದರ ತ್ವರಿತ ಅನುಷ್ಠಾನಕ್ಕೆ ಕೂಡ ಕೆಲಸ ಮಾಡುವಂತೆ ಪ್ರಧಾನಮಂತ್ರಿಗಳು ವಿಶ್ವವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಒತ್ತಾಯಿಸಿದರು.
“ದೇಶವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸುವ ಹೊತ್ತಿಗೆ, ಎನ್ಇಪಿ ಪೂರ್ಣ ಪ್ರಮಾಣದಲ್ಲಿ ನಮ್ಮ ಶಿಕ್ಷಣ ನೀತಿಯ ಒಂದು ಭಾಗವಾಗಲಿದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.