ಬೆಂಗಳೂರು: ನೆರೆಯ ರಾಜ್ಯ ಕೇರಳದ ಶಬರಿಮಲೆ ಶ್ರೀ ಅಯ್ಯಪ್ಪ ಸನ್ನಿಧಾನಕ್ಕೆ ತೆರಳುವ ಕರ್ನಾಟಕದ ಭಕ್ತರ ಸಹಾಯಕ್ಕಾಗಿ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಈ ಬಾರಿಯ ಮಂಡಲ- ಮಕರವಿಳಕ್ಕು ದರ್ಶನಕ್ಕೆ ತೆರಳುವ ರಾಜ್ಯದ ಅಯ್ಯಪ್ಪ ಭಕ್ತರಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ. ಯಾತ್ರೆ ಮಾಡುವವರು ಅಗತ್ಯ ಮಾಹಿತಿ ಹಾಗು ತುರ್ತು ಸಂದರ್ಭಗಳಲ್ಲಿ ಈ ಸಹಾಯವಾಣಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಟೋಲ್ ಫ್ರೀ ನಂ 080-26409689 ಅನ್ನು ಸಂಪರ್ಕಿಸುವ ಮೂಲಕ ನೆರವು ಪಡೆದುಕೊಳ್ಳಬಹುದಾಗಿದೆ.
ಕೇರಳ ರಾಜ್ಯದ ಗಡಿ ಭಾಗಗಳು, ಶಬರಿಮಲೆ ಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾದರೂ ಈ ಸಹಾಯವಾಣಿಗೆ ಕರೆ ಮಾಡಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.