ಬೆಂಗಳೂರು: ಮಹಿಳಾ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯದ ಮಹಿಳೆಯರನ್ನು ಬಲಿಷ್ಠರನ್ನಾಗಿಸಲು ‘ಮಹಿಳೆಯರಿಗೆ ಆತ್ಮರಕ್ಷಣೆ ತರಬೇತಿ ಯೋಜನೆ’ ಜಾರಿಗೆ ತರಲು ರಾಜ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಾಗುವ ಅಪರಾಧ ಕೃತ್ಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ಮಹತ್ವದ ಕ್ರಮ ಇದಾಗಿದೆ. ದೇಶದಲ್ಲಿ ಕೇಳಿ ಬರುತ್ತಿರುವ ಅತ್ಯಾಚಾರ, ಮಹಿಳಾ ದೌರ್ಜನ್ಯ ಮೊದಲಾದವುಗಳನ್ನು ತಡೆಯುವ ಹಿನ್ನೆಲೆಯಲ್ಲಿ ಅವುಗಳನ್ನು ಸಮರ್ಥವಾಗಿ ಎದುರಿಸಲು ಮಹಿಳೆಯರನ್ನು ಸಶಕ್ತರನ್ನಾಗಿ ಮಾಡುವ ದೃಷ್ಟಿಯಿಂದ ಈ ಯೋಜನೆ ಹೆಚ್ಚು ಪೂರಕವಾಗಿದೆ. ಅಂತಹ ಘಟನೆಗಳು ನಡೆದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ, ಮಹಿಳಾ ದೌರ್ಜನ್ಯಗಳಂತಹ ಘಟನೆಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಮಹಿಳೆಯರಿಗೆ ಆತ್ಮರಕ್ಷಣೆ ತರಬೇತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಈ ಯೋಜನೆಯ ಮೂಲಕ ಸರಳ ಮತ್ತು ಆಕ್ರಮಣಕಾರಿ ತರಬೇತಿಗಳನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಸಮಾಜದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ ಮೊದಲಾದ ಸಂದರ್ಭದಲ್ಲಿ ಮಹಿಳೆಯರು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಜೊತೆಗೆ ನಿರ್ಭಯ ನಿಧಿಯಲ್ಲಿ ಹಣ ಬಳಕೆ ಮಾಡಿಕೊಳ್ಳುವುದು, ಹೆಚ್ಚಿನ ಧನ ಸಹಾಯಕ್ಕಾಗಿ ಹಣಕಾಸು ಇಲಾಖೆಗೂ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಿದೆ.
ಈ ತರಬೇತಿಯನ್ನು 2021 ರ ಜನವರಿ ಕೊನೆಯ ವಾರದಲ್ಲಿ ಆರಂಭ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. 22 ಪೊಲೀಸ್ ಶಾಲೆಗಳಲ್ಲಿ ನಾಲ್ಕು ತಿಂಗ ತರಬೇತಿಯಂತೆ ಮೂರು ಬ್ಯಾಚ್ಗಳಲ್ಲಿ ತರಬೇತಿ ನೀಡಲಾಗುತ್ತದೆ. ನಿವೃತ್ತ ಅಧಿಕಾರಿಗಳು ಈ ತರಬೇತಿ ನೀಡಲಿದ್ದಾರೆ. ಪ್ರತಿ ಬ್ಯಾಚ್ನಲ್ಲಿ ಆಯ್ಕೆಯಾಗುವ 100-120 ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆ. ಮಹಿಳೆಯರನ್ನು ಮಾನಸಿಕ ಮತ್ತು ದೈಹಿಕವಾಗಿ ಬಲಿಷ್ಠರನ್ನಾಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.