ಬೆಂಗಳೂರು: ಮನ್ರೇರಾ ಯೋಜನೆಯಡಿ ಮೆಟೀರಿಯಲ್ ಬಿಲ್ ಪಾವತಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ 1,119 ಕೋಟಿ ರೂ. ಅನುದಾನವನ್ನು ಒದಗಿಸಿಕೊಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಈಶ್ವರಪ್ಪ ಈ ಸಂಬಂಧ ಮಾಹಿತಿ ನೀಡಿದ್ದಾರೆ. ಮನ್ರೇಗಾ ಯೋಜನೆಯಡಿಯಲ್ಲಿ ಸಂಪೂರ್ಣಗೊಂಡ ಕಾಮಗಾರಿಗಳ ದಾಖಲೆಗಳನ್ನು ರಾಜ್ಯ ಒದಗಿಸಿದ ಕೂಡಲೇ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿರುವುದಾಗಿಯೂ ಈಶ್ವರಪ್ಪ ತಿಳಿಸಿದ್ದಾರೆ.
ಈ ವರ್ಷದಲ್ಲಿ ರಾಜ್ಯ ಮನ್ರೇಗಾ ಯೋಜನೆಯಡಿಯಲ್ಲಿ ಅನೇಕರಿಗೆ ಉದ್ಯೋಗ ಕಲ್ಪಿಸಿಕೊಡುವಲ್ಲಿ ಉತ್ತಮವಾದ ಹೆಜ್ಜೆಗಳನ್ನಿರಿಸಿದೆ. ಈ ವರ್ಷ 13 ಕೋಟಿ ಮಾನವ ದಿನಗಳ ಗುರಿಯನ್ನು ಸರ್ಕಾರ ಹೊಂದಿತ್ತು. ಸದ್ಯ 10.50 ಕೋಟಿ ಮಾನವ ದಿನಗಳ ಉದ್ಯೋಗ ನೀಡಲಾಗಿದೆ. ಇನ್ನುಳಿದ 2 ಕೋಟಿ ಜನರಿಗೆ ಮನ್ರೇಗಾದಡಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಗುರಿ ಸಾಧಿಸುವ ಭರವಸೆಯನ್ನು ಕೇಂದ್ರ ಸರ್ಕಾರ ಹೊಂದಿರುವುದಾಗಿ ಸಚಿವರು ಹೇಳಿದ್ದಾರೆ.
ಈ ವರ್ಷದಲ್ಲಿ ರಾಜ್ಯ 900 ಕೋಟಿ ಹೆಚ್ಚುವರಿ ಅನುದಾನವನ್ನು ಪಡೆದುಕೊಳ್ಳಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಇಲಾಖೆಯಿಂದ ಪ್ರವಾಹ ಪೀಡಿತ ಎಂದು ಘೋಷಿಸಲ್ಪಟ್ಟ 173 ತಾಲೂಕುಗಳಿಗೆ ಸಂಬಂಧಿಸಿದಂತೆ ಪ್ರತಿ ಕುಟುಂಬಕ್ಕೆ ಮನ್ರೇಗಾದಡಿ ಉದ್ಯೋಗ ದಿನವನ್ನು 100 ರಿಂದ 150 ದಿನಗಳಿಗೆ ಏರಿಕೆ ಮಾಡುವ ಪ್ರಸ್ತಾಪವನ್ನು ಕಳುಹಿಸಲಾಗಿದೆ. ಈ ವಿಚಾರವನ್ನು ಪರಿಷ್ಕರಣೆ ಮಾಗುವುದಾಗಿಯೂ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಆ ಮೂಲಕ ರಾಜ್ಯಕ್ಕೆ ಹೆಚ್ಚುವರಿ 400.ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರದಿಂದ ಪಡೆಯಲಾಗುತ್ತದೆ ಎಂದು ಈಶ್ವರಪ್ಪ ಅವರು ತಿಳಿಸಿದ್ದಾರೆ.
ಜೊತೆಗೆ ಶ್ಯಾಮ್ ಪ್ರಸಾದ್ ಮುಖರ್ಜಿ ಆರ್-ಅರ್ಬನ್ ಮಿಷನ್ ಅಡಿಯಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ 90 ಹೆಚ್ಚುವರಿ ಕ್ಲಸ್ಟರ್ ಗ್ರಾಮಗಳನ್ನು ಮಂಜೂರು ಮಾಡುವಂತೆಯೂ ಕೇಂದ್ರ ಸರ್ಕಾರ ಕ್ಕೆ ಮನವಿ ಮಾಡಲಾಗಿದ್ದು, ಬೇಡಿಕೆಯನ್ನು ಪರಿಗಣಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದು ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.