ಬೆಂಗಳೂರು: ಕೊರೋನಾ ಸೋಂಕಿತರು ಮತ್ತು ಸೋಂಕಿನಿಂದ ಚೇತರಿಸಿಕೊಂಡವರು ಆ ಬಳಿಕ ಕೆಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಆಯ್ದ ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಾಯೋಗಿಕ ಅಧ್ಯಯನ ನಡೆಸಲು ಮುಂದಾಗಿದ್ದಾರೆ.
ಬಿಬಿಎಂಪಿ ಆರೋಗ್ಯ ವಿಭಾಗದ ಆಯುಕ್ತ ರಾಜೇಂದ್ರ ಚೋಳನ್ ಅವರು ಈ ಸಂಬಂಧ ಮಾಹಿತಿ ನೀಡಿದ್ದು, ಮಲ್ಲೇಶ್ವರಂ, ಸಿದ್ದಯ್ಯ ರಸ್ತೆ, ಅಲಸೂರು, ಶ್ರೀರಾಂಪುರ, ಹೊಸಹಳ್ಳಿ, ಬನಶಂಕರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಜ್ಞರ ತಂಡಗಳ ಮೂಲಕ ಪ್ರಾಯೋಗಿಕ ಅಧ್ಯಯನ ನಡೆಸಲಾಗುತ್ತಿರುವುದಾಗಿ ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಗುಣಮುಖರಾದ ಬಳಿಕ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ. ಇದಕ್ಕೆ ಸರ್ಕಾರದಿಂದ ಒಪ್ಪಿಗೆ ದೊರೆತ ಬಳಿಕ ಫಲಿತಾಂಶ ಜಾರಿಗೊಳಿಸಲಾಗುತ್ತದೆ. ಪರೀಕ್ಷಾ ವರದಿಗಳನ್ನು ಬಿಡುಗಡೆ ಮಾಡುವ ವ್ಯವಸ್ಥೆ, ನೆಗೆಟಿವ್ ವರದಿಗಳ ವಿಕೇಂದ್ರೀಕರಣ ಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗುವುದಾಗಿಯೂ ಬಿಬಿಎಂಪಿ ಮಾಹಿತಿ ನೀಡಿದೆ.
ಸದ್ಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಟ್ರೀಮ್ ಲೈನ್ ಮಾಡಲಾಗಿದೆ. ವರದಿಗಳು 8-32 ಗಂಟೆಗಳಲ್ಲಿ ಸಿಗುತ್ತವೆ. ಬಿಬಿಎಂಪಿ ಪ್ರತಿ ವಾರ್ಡ್ಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ವಾರ್ಡ್ ಆಫೀಸ್ಗಳಲ್ಲಿ ಎರಡು ಸ್ಟೇಷನರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಆ ಮೂಲಕ ಸಾರ್ವಜನಿಕರು ಎಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು, ಎಲ್ಲಿಂದ ಫಲಿತಾಂಶ ಪಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಬಹುದು ಎಂದು ಬಿಬಿಎಂಪಿ ಹೇಳಿದೆ. ಈ ಕೇಂದ್ರಗಳ ಜಿಪಿಎಸ್ ಕೇಂದ್ರಗಳನ್ನು ಬಿಬಿಎಂಪಿ ವೆಬ್ಸೈಟ್ನಲ್ಲಿ ಅಳವಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಮೊಬೈಲ್ ಪರೀಕ್ಷಾ ಘಟಕಗಳು ಕೊಮೊರ್ಬಿಡಿಟಿಗಳು, ಕೊಳೆಗೇರಿಗಳು, ಅಗತ್ಯವಿರುವ ಇನ್ನಿತರರತ್ತ ಗಮನ ಹರಿಸಲಿವೆ ಎಂದು ಬಿಬಿಎಂಪಿ ಹೇಳಿದೆ.
ಬಿಬಿಎಂಪಿ ಹೋಂ ಐಸೋಲೇಷನ್ ಸರ್ಟಿಫಿಕೇಟ್ ವಿತರಿಸುವ ಪ್ರಕ್ರಿಯೆಯನ್ನು ಸುಧಾರಣೆ ಮಾಡಲಿದೆ. ಜೊತೆಗೆ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಆರೈಕೆ ಸಹ ನೀಡುತ್ತಿದೆ. ಪರೀಕ್ಷಾ ಕೇಂದ್ರಗಳನ್ನು ಆರಂಭಿಸುವ ಸಂಬಂಧ ಕಾಲೇಜುಗಳ ಜೊತೆಗೂ ಮಾತುಕತೆ ನಡೆಸುತ್ತಿದೆ. ಈವರೆಗೆ ಕಾಲೇಜುಗಳಲ್ಲಿ ಸುಮಾರು 480 ಮೊಬೈಲ್ ತಂಡಗಳು 33 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷಿಸಿರುವುದಾಗಿಯೂ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.