ನವದೆಹಲಿ: ಫ್ರಾನ್ಸ್ನ ಭಾರತದ ರಾಯಭಾರಿ ಎಮ್ಯಾನುಯೆಲ್ ಲೆನೈನ್ ಅವರು ಎರಡು ದಿನಗಳ ಉತ್ತರಪ್ರದೇಶದ ಪ್ರವಾಸ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಗೋರಖ್ಪುರದಲ್ಲಿ ವೇದ ಪಠಣದೊಂದಿಗೆ ಗೋರಖನಾಥ ದೇವಸ್ಥಾನದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು.
ಒಂದು ಗಂಟೆಗೂ ಹೆಚ್ಚು ಕಾಲ ದೇವಾಲಯದಲ್ಲಿದ್ದ ಅವರು, ಈ ವಿಶ್ವಪ್ರಸಿದ್ಧ ದೇವಾಲಯದ ಬಗ್ಗೆ ತಿಳಿದುಕೊಂಡು ಗೋವಿನ ಆಶ್ರಯಕ್ಕೆ ತೆರಳಿ ಅಲ್ಲಿ ಗೋವುಗಳಿಗೆ ಬೆಲ್ಲವನ್ನು ತಿನ್ನಿಸಿದರು.
ದೇವಾಲಯದ ಆವರಣದಲ್ಲಿರುವ ಎಲ್ಲಾ ದೇವಾಲಯಗಳನ್ನು ಲೆನೈನ್ ಸುತ್ತಿದರು. ಭೀಮ್ ಸರೋವರ್ ಮತ್ತು ಇತರ ಸ್ಥಳಗಳಲ್ಲಿಯೂ ಅವರು ಛಾಯಾಚಿತ್ರಗಳನ್ನು ತೆಗೆದುಕೊಂಡರು.
ಹಸುಗಳ ರಕ್ಷಣೆಗಾಗಿ ದೇವಾಲಯದ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡೆಸುತ್ತಿರುವ ಎಲ್ಲಾ ಯೋಜನೆಗಳು ಮತ್ತು ಅಭಿಯಾನಗಳ ಬಗ್ಗೆ ಫ್ರಾನ್ಸ್ ರಾಯಭಾರಿ ಮಾಹಿತಿಯನ್ನು ಪಡೆದುಕೊಂಡರು.
ಗೋರಖನಾಥ ದೇವಾಲಯ ಮಂಡಳಿ ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆಗಳಲ್ಲಿ ಪ್ರಕಟಗೊಳಿಸಿದ ಗೀತಾ ಪ್ರೆಸ್ ಮತ್ತು ಗೋರಖನಾಥ ದೇವಾಲಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪುಸ್ತಕಗಳನ್ನು ಅವರಿಗೆ ಈ ಸಂದರ್ಭದಲ್ಲಿ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.