ನವದೆಹಲಿ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ನಿನ್ನೆ ಕ್ಲೈಮೇಟ್ ಚೇಂಜ್ ನಾಲೆಡ್ಜ್ ಪೋರ್ಟಲ್ ( ಭಾರತ ಹವಾಮಾನ ಬದಲಾವಣೆ ಜ್ಞಾನ ಪೋರ್ಟಲ್)ಗೆ ಚಾಲನೆಯನ್ನು ನೀಡಿದ್ದಾರೆ.
ಹವಾಮಾನ ಬದಲಾವಣೆಯ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಎಲ್ಲಾ ಪ್ರಮುಖ ಕ್ರಮಗಳ ಬಗ್ಗೆ ಪೋರ್ಟಲ್ ಮಾಹಿತಿಯನ್ನು ನೀಡುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಾವಡೇಕರ್, ಇದು ಏಕ-ಹಂತದ ಮಾಹಿತಿ ಸಂಪನ್ಮೂಲವಾಗಿದ್ದು, ವಿವಿಧ ಸಚಿವಾಲಯಗಳು ತೆಗೆದುಕೊಂಡ ವಿವಿಧ ಹವಾಮಾನ ಉಪಕ್ರಮಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ ಎಂದಿದ್ದಾರೆ.
ಪ್ಯಾರಿಸ್ ಒಪ್ಪಂದದ ನಂತರದ ಹವಾಮಾನ ಕ್ರಮಗಳಿಗೆ ಸಂಬಂಧಿಸಿದಂತೆ, ಭಾರತವು 2020 ರ ಪೂರ್ವದ ಹವಾಮಾನ ಕ್ರಿಯಾ ಗುರಿಗಳನ್ನು ಪ್ರಾಯೋಗಿಕವಾಗಿ ಸಾಧಿಸಿದೆ ಎಂದು ಜಾವಡೇಕರ್ ಹೇಳಿದರು. ಹವಾಮಾನ ವೈಪರೀತ್ಯಕ್ಕೆ ಭಾರತ ಜವಾಬ್ದಾರಿಯಲ್ಲದಿದ್ದರೂ ಸವಾಲನ್ನು ತಗ್ಗಿಸಲು ಜವಾಬ್ದಾರಿಯುತ ಕ್ರಮ ಕೈಗೊಳ್ಳುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.