ಬೆಂಗಳೂರು: ಡಿ. 15 ರಿಂದ ಡಿ. 23 ರ ವರೆಗೆ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯಿಂದ ರಾಜ್ಯ ಮಟ್ಟದ ನೇಮಕಾತಿ ರ್ಯಾಲಿ ನಡೆಯಲಿದೆ.
ಈ ಸಂಬಂಧ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಸೈನಿಕ ಕಲ್ಯಾಣ ಇಲಾಖೆ, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ, ಪೊಲೀಸ್, ಆರೋಗ್ಯ, ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ರ್ಯಾಲಿಯನ್ನು ಒಟ್ಟು 2 ಸಾವಿರ ಜನರನ್ನು ನೇಮಕ ಮಾಡುವ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿದೆ. ದಿನಕ್ಕೆ 2 ಸಾವಿರ ಜನರಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲು ಪೂರಕವಾಗುವಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ನೋಂದಾವಣಿ ಪ್ರಕ್ರಿಯೆ ಸಹ ಆರಂಭವಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನೇಮಕಾತಿ ರ್ಯಾಲಿ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಿಗೆ ಜವಾಬ್ದಾರಿ ವಹಿಸಲಾಗಿದೆ. ರ್ಯಾಲಿಗೆ ಸಂಬಂಧಿಸಿದಂತೆ ಇದು ಎರಡನೇ ಪೂರ್ವಭಾವಿ ಸಭೆಯಾಗಿದ್ದು, ಮೂರನೇ ಪೂರ್ವಭಾವಿ ಸಭೆಯನ್ನು ಡಿ. 7 ರಂದು ನಡೆಸಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.