ಲಕ್ನೋ: ಉತ್ತರಪ್ರದೇಶ ಸರ್ಕಾರ ಇತ್ತೀಚೆಗೆ ಅನುಮೋದಿಸಿದ ಬಲವಂತದ ಧಾರ್ಮಿಕ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಇಂದು ಅಲ್ಲಿನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಅಂಕಿತ ಹಾಕಿದ್ದಾರೆ.
ವಿವಾಹದ ಕಾರಣಕ್ಕಾಗಿ ಅಥವಾ ಬಲವಂತವಾಗಿ ಧಾರ್ಮಿಕ ಮತಾಂತರ ಮಾಡುವುದನ್ನು ತಡೆಗಟ್ಟುವ ಕರಡು ಸುಗ್ರೀವಾಜ್ಞೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಅನುಮೋದನೆಯನ್ನು ನೀಡಿತ್ತು.
ಇದೀಗ ಈ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದಿರುವುದರಿಂದ ಅದು ಜಾರಿಗೊಂಡಂತಾಗಿದೆ.
ಈ ಸುಗ್ರೀವಾಜ್ಞೆಯ ಅಡಿಯಲ್ಲಿ ಬಲವಂತದ ಮತಾಂತರ ಮಾಡುವವರಿಗೆ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವಿದೆ.
Uttar Pradesh Governor promulgates UP Prohibition of Unlawful Conversion of Religion Ordinance 2020 pic.twitter.com/bXLSmb07y5
— ANI UP (@ANINewsUP) November 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.