ಬೆಳಗಾವಿ: ರಾಜ್ಯದ ಅನೇಕ ಅಣೆಕಟ್ಟುಗಳ ಸಬಲೀಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 750 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ನವದೆಹಲಿಯ ಜಲಶಕ್ತಿ ಭವನದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಸಚಿವರು, ಬಳಿಕ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ವಿಶ್ವ ಬ್ಯಾಂಕ್ನ ಡ್ಯಾಮ್ ರಿಹ್ಯಾಬಿಲಿಟೇಶನ್ ಆ್ಯಂಡ್ ಇಂಪ್ರೂವ್ಮೆಂಟ್ ಪ್ರಾಜೆಕ್ಟ್ (ಡ್ರಿಪ್) ಯೋಜನೆಯ ಮೂಲಕ ರಾಜ್ಯದ 52 ಅಣೆಕಟ್ಟುಗಳನ್ನು ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಈ ಅನುದಾನವನ್ನು ಕೇಂದ್ರ ಸರ್ಕಾರ ಒದಗಿಸಿದೆ. ರಾಜ್ಯ ಜಲಸಂಪನ್ಮೂಲ ಇಲಾಖೆ ಒಟ್ಟು 1,500 ಕೋಟಿ ರೂ. ಗಳನ್ನು ಅಣೆಕಟ್ಟುಗಳ ಅಭಿವೃದ್ಧಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರಲ್ಲಿ 750 ಕೋಟಿ ರೂ. ಗಳನ್ನು ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ನಿರ್ದಿಷ್ಟ ಕಾಲಮಿತಿಯೊಳಗೆ ಸರ್ಕಾರ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸಿದ್ಧವಾಗಿದೆ. ಶೀಘ್ರದಲ್ಲೇ ಅತ್ಯಂತ ವೇಗವಾಗಿ ಕಾರ್ಯ ಯೋಜನೆಗಳನ್ನು ಅಂತಿಮಗೊಳಿಸಿ ಅನುಮೋದನೆ ಪಡೆಯಲು ಪ್ರಯತ್ನ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.