ಬೆಂಗಳೂರು: ಡಿ. 1 ರಿಂದ ಅನ್ವಯವಾಗುವಂತೆ ಹೊಸ ಕೊರೋನಾ ಮಾರ್ಗಸೂಚಿಯೊಂದನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಈ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಈ ಪರಿಷ್ಕೃತ ಮಾರ್ಗಸೂಚಿ ಡಿಸೆಂಬರ್ ಅಂತ್ಯದ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಮಾರ್ಗಸೂಚಿಯನ್ನು ರಾಜ್ಯದ ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಆರ್ಥಿಕತೆಯನ್ನು ಎತ್ತಿ ಹಿಡಿಯುವ ಸಲುವಾಗಿ ವ್ಯಾಪಾರ ಚಟುವಟಿಕೆಗಳಿಗಷ್ಟೇ ವಸ್ತು ಪ್ರದರ್ಶನ ಮಳಿಗೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಸಭಾಭವನ ಸಾಮರ್ಥ್ಯವನ್ನು 200 ಜನರ ಮಿತಿಗೆ ನಿಯಂತ್ರಿಸಬೇಕು. ಧಾರ್ಮಿಕ, ಕ್ರೀಡೆ, ಶೈಕ್ಷಣಿಕ, ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳಿಗೆ ಅನುಮತಿ ನೀಡಬಹುದು ಎಂದು ಸರ್ಕಾರ ಈ ಮಾರ್ಗಸೂಚಿಯಲ್ಲಿ ಮಾಹಿತಿ ನೀಡಿದೆ.
ಸೋಂಕಿತರ ಪ್ರಮಾಣ ಅಧಿಕವಾಗಿರುವಲ್ಲಿ ಕಚೇರಿಗಳಲ್ಲಿ ಪಾಳಿಯ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆಯೂ ಸೂಚಿಸಲಾಗಿದೆ. 50% ಅಥವಾ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸುವಲ್ಲಿ ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಜೊತೆಗೆ ಸೋಂಕು ನಿಯಂತ್ರಣ ನಿಯಮಗಳನ್ನು ಯಾವುದೇ ಕಾರಣಕ್ಕೂ ದುರ್ಬಲಗೊಳಿದಂತೆಯೂ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ವರ್ಕ್ ಫ್ರಂ ಹೋಂಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಸೋಂಕು ಪತ್ತೆ, ನೈರ್ಮಲ್ಯ ಕಾಪಾಡಿಕೊಳ್ಳಲು ಹೆಚ್ಚು ಒತ್ತು ನೀಡುವುದು, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಹೆಚ್ಚು ಪ್ರಾಶಸ್ತ್ಯ ನೀಡುವಂತೆಯೂ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.