ನವದೆಹಲಿ: ಕಳೆದ ಜುಲೈ ತಿಂಗಳಿನಿಂದ ಈವರೆಗೆ ಭಾರತ ಅನೇಕ ಕ್ಷಿಪಣಿಗಳ ಪರೀಕ್ಷೆ ನಡೆಸಿದ್ದು, ಅದರಲ್ಲಿ ಯಶಸ್ಸು ಸಾಧಿಸಿದೆ. ಜೊತೆಗೆ ಆ ಮೂಲಕ ಚೀನಾಕ್ಕೂ ಸ್ಪಷ್ಟ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚೀನಾ ಭಾರತದ ಜೊತೆಗೆ ಕಾಲ್ಕೆರೆದುಕೊಂಡು ಕ್ಯಾತೆ ತೆಗೆದ ಬಳಿಕ ಲಡಾಖ್ನ ಗಡಿಯಲ್ಲಿ ಭಾರತೀಯ ಸೇನಾ ಪಡೆಯನ್ನು ಸಹ ನಿಯೋಜನೆ ಮಾಡುವ ಮೂಲಕ ಚೀನಾಗೆ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರತವು ವ್ಯಾಪಕ ಶ್ರೇಣಿಯ ಕ್ಷಿಪಣಿಗಳ ಪೈಕಿ, ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಬಂಗಾಳ ಕೊಲ್ಲಿಯಲ್ಲಿ ನ. 24 ರಂದು ಉಡಾಯಿಸಿತ್ತು. ಭಾರತ ಮತ್ತು ರಷ್ಯಾಗಳು ಜಂಟಿಯಾಗಿ ತಯಾರಿಸಿದ 2.8 ಮಾಕ್ ಸ್ಪೀಡ್ನ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಜಲಾಂತರ್ಗಾಮಿ ನೌಕೆಗಳು, ಹಡಗುಗಳು, ವಿಮಾನ, ಭೂ ಆಧಾರಿತ ವೇದಿಕೆಗಳಿಂದಲೂ ಉಡಾಯಿಸಲು ಸಾಧ್ಯವಿದೆ ಎಂದು ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಡಾಖ್, ಅರುಣಾಚಲ ಪ್ರದೇಶಗಳಲ್ಲಿ ಎಲ್ಎಸಿಯ ಉದ್ದಕ್ಕೂ ಅನೇಕ ಬ್ರಹ್ಮೋಸ್ ಬ್ಯಾಟರಿಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೆಯೇ 40 ಕ್ಕೂ ಅಧಿಕ ಸುಖೋಯ್ ಫೈಟರ್ ಜೆಟ್ ಗಳಲ್ಲಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಸಂಯೋಜಿಸಲು ಚಿಂತಿಸಲಾಗಿದೆ. ಹಾಗೆಯೇ ಡಿಆರ್ಡಿಒ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ ಪೃಥ್ವಿ-2 ಯ ರಾತ್ರಿಯ ಪ್ರಯೋಗವನ್ನು ಸಹ ನಡೆಸಲಾಗಿದೆ. ಯುದ್ಧ ಟ್ಯಾಂಕ್ಗಳನ್ನು ನಾಶ ಮಾಡುವ ನಾಗ್ ಹೆಲಿನಾ, ಮೂರನೇ ತಲೆಮಾರಿನ Anti ಟ್ಯಾಂಕ್ ಗೈಡೆಡ್ ಕ್ಷಿಪಣಿ, ರುದ್ರಂ- 1 ಮೊದಲಾದವುಗಳ ಪ್ರಯೋಗವನ್ನು ನಡೆಸಲಾಗಿದೆ. ಇದಲ್ಲದೆ ಇನ್ನೂ ಅನೇಕ ಕ್ಷಿಪಣಿಗಳ ಪರೀಕ್ಷೆಯನ್ನು ಭಾರತೀಯ ಸೇನೆ ನಡೆಸಿದೆ. ಮುಂದೆ ಶೌರ್ಯ ಕ್ಷಿಪಣಿಯ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಎಲ್ಲ ಕ್ಷಿಪಣಿಗಳ ಪರೀಕ್ಷೆಯ ಮೂಲಕ ಚೀನಾಗೆ ಭಾರತ ಸ್ಪಷ್ಟ ಸಂದೇಶವನ್ನು ನೀಡಿದೆ. ಭಾರತದ ಮೇಲೆ ಕುತಂತ್ರ, ಯುದ್ಧ ನಡೆಸಿದ ಸಂದರ್ಭದಲ್ಲಿ ಯಾವುದೇ ಕ್ಷಣದಲ್ಲಿ ಭೂ, ವಾಯು, ಜಲ ಪ್ರದೇಶಗಳ ಮೂಲಕವೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಸಿದ್ಧವಾಗಿದೆ ಎಂಬ ಎಚ್ಚರಿಕೆಯನ್ನು ರವಾನೆ ಮಾಡಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.