ನವದೆಹಲಿ: ರೈತರ ಪ್ರತಿಭಟನೆ 5 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಕೇಂದ್ರ ಸರ್ಕಾರ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತಾಪಿ ವರ್ಗಕ್ಕೆ ಸರಿಯಾಗಿ ಮನವರಿಕೆ ಮಾಡಿಕೊಡುವ, ಅದರಿಂದಾಗುವ ಉಪಯೋಗಗಳ ಬಗ್ಗೆ ತಿಳಿಸಿಕೊಡುವ ಹಿನ್ನೆಲೆಯಲ್ಲಿ ಪ್ರಯತ್ನ ಮುಂದುವರಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಹೊಸ ಕೃಷಿ ನೀತಿಗಳು ಎಪಿಎಂಸಿ ಮಂಡಿಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅವರಿಗೆ ತಮ್ಮ ಬೆಳೆಗಳನ್ನು ಮುಕ್ತವಾಗಿ ಮಾರಾಟ ಮಾಡುವುದಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ. ಎಪಿಯಂಸಿ ಮಂಡಿಗಳು ಈ ಹಿಂದಿನಂತೆಯೇ ಕಾರ್ಯ ನಿರ್ವಹಿಸಲಿದೆ ಎಂಬುದಾಗಿಯೂ ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದಲೇ ಈ ಹೊಸ ಕೃಷಿ ನೀತಿಗಳನ್ನು ಜಾರಿಗೊಳಿಸಿದೆ. ಈ ಕಾನೂನಿನನ್ವಯ ರೈತ ತನ್ನ ಬೆಳೆಯನ್ನು ಎಪಿಎಂಸಿ ಹೊರತು ಪಡಿಸಿದಂತೆ ಯಾವುದೇ ಪ್ರದೇಶದಲ್ಲಿ ಬೇಕಾದರೂ, ತಾನೇ ಬೆಲೆ ನಿಗದಿ ಮಾಡುವ ಮೂಲಕ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಕಲ್ಪಿಸಲಾಗಿ. ಈ ನೂತನ ನೀತಿ ಕೃಷಿಕರಿಗೆ ಸಹಕಾರಿಯಾಗುವಂತಿದೆಯೇ ಹೊರತಾಗಿ ಇದರಿಂದಾಗಿ ಯಾವುದೇ ರೀತಿಯ ಹಾನಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಉತ್ತಮ ಬೆಲೆಗೆ ಮಾರಟ ಮಾಡಬಹುದು ಮತ್ತು ಲಾಭಾಂಶವನ್ನು ಸಹ ಪೂರ್ಣ ಪ್ರಮಾಣದಲ್ಲಿ ಪಡೆದುಕೊಳ್ಳುವುದಕ್ಕೆ ಇದು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.