ಬೆಂಗಳೂರು: ನಗರದ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರತಿನಿತ್ಯ 3 ಜೋಡಿ ರೈಲುಗಳ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ನಿರ್ಧರಿಸಿದೆ.
ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಸಂಚಾರ ದಟ್ಟಣೆಯ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಈ ರೀತಿಯ ಸಮಸ್ಯೆಗಳ ಪರಿಹಾರಕ್ಕಾಗಿ ಕೆಐಎ ಸಮೀಪ ರೈಲ್ವೆ ಹಾಲ್ಟ್ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲೇ ರೈಲು ಸೇವೆಯೂ ಸಹ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ, ಯಾವ ರೀತಿಯಲ್ಲಿ ಈ ಸೇವೆಯನ್ನು ಒದಗಿಸಬೇಕು ಎಂಬ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಕೆಎಎಸ್ ರೈಲು ನಿಲ್ದಾಣದಿಂದ ದೇವನಹಳ್ಳಿ ನಿಲ್ದಾಣಗಳ ವರೆಗೆ 3 ಜೋಡಿ ರೈಲುಗಳು ಸೇವೆಯನ್ನು ಒದಗಿಸಲಿವೆ. ಈ ರೈಲುಗಳು ಈ ಎರಡು ನಿಲ್ದಾಣಗಳ ನಡುವಿನ ಕೆಐಎ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಿದೆ. ಜನ ದಟ್ಟಣೆ ಅಧಿಕವಾಗಿರುವ ಸಂದರ್ಭದಲ್ಲಿ ಈ ರೈಲು ಸಂಚಾರವನ್ನು ನಡೆಸುವುದಾಗಿಯೂ ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ರೈಲುಗಳ ಮೂಲಕ 50 ನಿಮಿಷಗಳ ಒಳಗಾಗಿ ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣ ತಲುಪುವುದು ಸಾಧ್ಯವಾಗಲಿದೆ.
ನೈಋತ್ಯ ರೈಲ್ವೆ ಮತ್ತು ಬಿಐಎಎಲ್ ಸಹಯೋಗದಲ್ಲಿ ಸಕಲ ವ್ಯವಸ್ಥೆಗಳನ್ನು ಒಳಗೊಂಡ ಹಾಲ್ಟ್ ನಿಲ್ದಾಣ ಸಹ ನಿರ್ಮಾಣ ಮಾಡಲಾಗಿದೆ. ಈ ನಿಲ್ದಾಣದಲ್ಲಿ ಟಿಕೇಟ್ ಕೌಂಟರ್, ವಾಹನ ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಪ್ರಯಾಣಿಕರಿಗೆ ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ ಮೊದಲಾದ ಅನುಕೂಲಗಳನ್ನು ಸಹ ಕಲ್ಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.