ಬೆಂಗಳೂರು: ಕೊರೋನಾ ಲಸಿಕೆಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಅವರು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ, ವಿಶ್ವ ಏಡ್ಸ್ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಏಡ್ಸ್ ರೋಗಕ್ಕೆ ಈ ವರೆಗೆ ಸಮರ್ಪಕ ಔಷಧವನ್ನು ಕಂಡುಹಿಡಿಯಲಾಗಿಲ್ಲ. ವಿಶ್ವದಲ್ಲಿ 1980 ರಿಂದ ಈವರೆಗೆ ಏಡ್ಸ್ಗೆ ಬಲಿಯಾದವರ ಸಂಖ್ಯೆ 18 ಲಕ್ಷಕ್ಕೂ ಅಧಿಕವಾಗಿದೆ. ಆದರೆ ಏಡ್ಸ್ ನಿರೋಧಕ ಶಕ್ತಿ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಮತ್ತು ಜನರಲ್ಲಿ ಆ ಬಗ್ಗೆ ಇತ್ತೀಚಿನ ದಿನಗಳಲ್ಲಿ ಅರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಏಡ್ಸ್ ಹರಡುವಿಕೆಯ ಪ್ರಮಾಣ ಇಳಿಮುಖವಾಗಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೊರೋನಾ ಬಗೆಗೂ ಮಾತನಾಡಿದ ಅವರು, ವಿಶ್ವದಲ್ಲಿ ಕೊರೋನಾ ಸೋಂಕು ಹರಡುವ ತೀವ್ರತೆ ಹೆಚ್ಚಿದೆ. ಆದರೆ ಭಾರತದಲ್ಲಿ ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು ತೀವ್ರತೆ ಕಡಿಮೆಯಾಗಿದೆ. ಕೊರೋನಾ ಸೋಂಕಿಗೆ ಔಷಧ ಕಂಡುಹಿಡಿಯಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 10 ಕೋಟಿ ಜನರು ಇದರ ಉಪಯೋಗವನ್ನು ಪಡೆದುಕೊಳ್ಳಲಿದ್ದಾರೆ. ದೇಶದ ಬಿಪಿಎಲ್ ಕಾರ್ಡುದಾರರಿಗೆ ಈ ಲಸಿಕೆ ಉಚಿತವಾಗಿ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.