ಬೆಂಗಳೂರು: ನಗರದಲ್ಲಿ ಸಂಚಾರದ ಶಿಸ್ತು ಪಾಲನೆಯ ಹಿನ್ನೆಲೆಯಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ವಾಹನ ನಿಲುಗಡೆ ಶುಲ್ಕ ಸಂಗ್ರಹಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವಾಹನ ನಿಲುಗಡೆ ನೀತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಸಂಬಂಧ ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಶುಲ್ಕ ಸಂಗ್ರಹಿಸುವ ಬಗ್ಗೆ ಮತ್ತು ಇನ್ನಿತರ ಮಾರ್ಗಸೂಚಿಗಳ ಕರಡನ್ನು ಸಿದ್ಧಪಡಿಸುವ ಸಲುವಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಸಮಿತಿ ರಚನೆ ಮಾಡಿರುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಮತ್ತು ಬೇಕಾಬಿಟ್ಟಿ ವಾಹನಗಳನ್ನು ಪಾರ್ಕ್ ಮಾಡುವ ಸವಾರರ ಪ್ರವೃತ್ತಿಗೆ ಬ್ರೇಕ್ ಹಾಕುವ ಹಿನ್ನೆಲೆಯಲ್ಲಿ ಇಂತಹ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುವುದರಿಂದಾಗಿ ಜನಸಾಮಾನ್ಯರು ಸಹ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಇಂತಹ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.