ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಸಂಬಂಧಿಸಿದಂತೆ ಹೇಳಿಕೆಯನ್ನು ನೀಡಿರುವ ಕೆನಡಾದ ಪ್ರಧಾನಿಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಭಾರತದ ರೈತರಿಗೆ ಸಂಬಂಧಿಸಿದಂತೆ ಕೆನಡಾ ದೇಶದ ನಾಯಕರ ಪ್ರತಿಕ್ರಿಯೆಯನ್ನು ಗಮನಿಸಿದ್ದೇವೆ. ಒಂದು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವಿಚಾರಗಳಿಗೆ ಸಂಬಂಧಿಸಿದಂತೆ ಇಂತಹ ಹೇಳಿಕೆಗಳನ್ನು ನೀಡುವುದು ಅನಗತ್ಯವಾಗಿದೆ. ರಾಜತಾಂತ್ರಿಕ ಮಾತುಕತೆಗಳು ಉತ್ತಮವಾಗಿರಬೇಕು. ರಾಜಕೀಯ ಉದ್ದೇಶಗಳನ್ನಿರಿಸಿಕೊಂಡು ದಾರಿ ತಪ್ಪಿಸುವ ಪ್ರಯತ್ನ ಮಾಡಬಾರದು ಎಂದು ಅನುರಾಗ್ ತಿಳಿಸಿದ್ದಾರೆ. ಅಲ್ಲದೆ ಅವರ ಹೇಳಿಕೆ ಅನಗತ್ಯ ಹಾಗೂ ಅನಪೇಕ್ಷಿತ ಎಂದು ಅವರು ಕಟುವಾಗಿ ನುಡಿದಿದ್ದಾರೆ. ಭಾರತಕ್ಕೆ ಇಂತಹ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಶಕ್ತಿ ಇರುವುದಾಗಿಯೂ ಅವರು ತಿಳಿಸಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಸಂಬಂಧಿಸಿದಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆತಂಕಕಾರಿ. ಶಾಂತಿಯುತ ಪ್ರತಿಭಟನೆಗೆ ಕೆನಡಾ ಎಂದಿಗೂ ಬೆಂಬಲ ನೀಡಲಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ತಕ್ಕ ಉತ್ತರ ನೀಡುವ ಮೂಲಕ, ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸದಂತೆ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.