ನವದೆಹಲಿ: ಬ್ರಹ್ಮಪುತ್ರ ನದಿಯ ಮೇಲ್ದಂಡೆಯಲ್ಲಿ ಚೀನಾ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗುತ್ತಿದೆ ಎಂಬುದನ್ನು ಗಂಭೀರವಾಗಿ ಪರಿಣಮಿಸಿರುವ ಭಾರತ ಸರ್ಕಾರ, ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಅಪಾಯವನ್ನು ತಡೆಯುವ ನಿಟ್ಟಿನಲ್ಲಿ ಅರುಣಾಚಲ ಪ್ರದೇಶದಲ್ಲಿ ಇದೇ ನದಿಗೆ 10 ಗಿಗಾವ್ಯಾಟ್ ಜಲವಿದ್ಯುತ್ ಸಾಮರ್ಥ್ಯವುಳ್ಳ ಅಣೆಕಟ್ಟು ನಿರ್ಮಾಣಕ್ಕೆ ಚಿಂತನೆ ನಡೆಸಿದೆ.
ಚೀನಾ ಅಣೆಕಟ್ಟು ನಿರ್ಮಾಣ ಮಾಡಿದ ಪಕ್ಷದಲ್ಲಿ ದಿಢೀರನೆ ಪ್ರವಾಹ ಅಥವಾ ಕೃತಕವಾಗಿ ನೀರಿನ ಅಭಾವಗಳು ಉಂಟಾಗುವ ಸಾಧ್ಯತೆಗಳನ್ನು ಸಹ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ವಿಚಾರವನ್ನು ಸಹ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಚೀನಾದ ಆಕ್ರಮಣಕಾರಿ ಯೋಜನೆಯ ದುಷ್ಪರಿಣಾಮ ತಡೆಯುವ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಣೆಕಟ್ಟು ನಿರ್ಮಾಣ ಈ ಕ್ಷಣದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿ ಟಿ. ಎಸ್. ಮೆಹ್ರಾ ತಿಳಿಸಿದ್ದಾರೆ.
ಚೀನಾದ ಅಣೆಕಟ್ಟಿನ ಹರಿವನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಹೊಂದುವ ದೃಷ್ಟಿಯಿಂದ ಭಾರತವು ದೊಡ್ಡ ಮಟ್ಟದ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ವ್ಯವಸ್ಥೆಯೊಂದನ್ನು ಸೃಷ್ಟಿಸಲು ಚಿಂತನೆ ನಡೆಸಿರುವುದಾಗಿಯೂ ಮೆಹ್ರಾ ತಿಳಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಭಾರತದ ಜೊತೆಗೆ ಚೀನಾ ಕಾಲ್ಕೆರೆದುಕೊಂಡು ಸಂಘರ್ಷ ನಡೆಸಿದ ಬಳಿಕ ಉಭಯ ದೇಶಗಳ ಸಂಬಂಧ ಹಳಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.