ಬೆಂಗಳೂರು: 2018 ರಿಂದ ನೆನೆಗುದಿಗೆ ಬಿದ್ದಿದ್ದ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮ (ಎನ್ಎಂಡಿಸಿ) ದಲ್ಲಿ ಮತ್ತೆ ಕಬ್ಬಿಣದ ಅದಿರು ಗಣಿಗಾರಿಕೆ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಗಣಿ ಮಂತ್ರಾಲಯದಿಂದ ಈ ದಿಟ್ಟ ನಿರ್ಧಾರವನ್ನು ತೆಗೆದುಕೊಂಡು ಗಣಿಗಾರಿಕೆಗೆ ಅನುಮೋದನೆಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗುತ್ತಿಗೆಗೆ ಮಧ್ಯಂತರ ವ್ಯವಸ್ಥೆಯ ಅಡಿಯಲ್ಲಿ ರಾಜ್ಯ ಸರ್ಕಾರ ಇಂದು ಈ ಅಧಿಸೂಚನೆ ಹೊರಡಿಸಿದೆ ಎಂದು ಅವರು ಟ್ವೀಟ್ ಮೂಲಕವೇ ಮಾಹಿತಿ ನೀಡಿದ್ದಾರೆ.
ದೋಣಿಮಲೈನ 597.54 ಹೆಕ್ಟೇರ್ ಪ್ರದೇಶದಲ್ಲಿ ಶೀಘ್ರದಲ್ಲೇ ಗಣಿಗಾರಿಕೆ ಆರಂಭವಾಗಲಿದೆ. ಈ ಯೋಜನೆಯಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ 400 ಕೋಟಿ ಆದಾಯ ಬರುವ ನಿರೀಕ್ಷೆಯನ್ನು ಸಹ ಜೋಷಿ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಪ್ರತಿವರ್ಷ ರಾಜ್ಯಕ್ಕೆ 1100 ಕೋಟಿ ರೂ. ಆದಾಯ ಹರಿದು ಬರಲು ಇದು ದಾರಿಯಾಗಲಿದೆ. ಹಾಗೆಯೇ ಉದ್ಯೋಗ ಸೃಷ್ಟಿಯ ದೃಷ್ಟಿಯಿಂದಲೂ ಇದು ಮಹತ್ವ ಪಡೆಯಲಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ 2030 – 31 ರ ವೇಳೆಗೆ 300 ಎಂಟಿಪಿಎ ಕಬ್ಬಿಣದ ಅದಿರು ಉತ್ಪಾದನೆಯ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಈ ಹಿನ್ನೆಲೆಯಲ್ಲಿಯೂ ಇದು ಸಹಾಯಕವಾಗಲಿದೆ. ಗಣಿ ಮಂತ್ರಾಲಯದ ಈ ನಿರ್ಣಯದಿಂದ ದೇಶ ಮತ್ತು ರಾಜ್ಯಗಳೆರಡೂ ಲಾಭ ಪಡೆಯಲಿದೆ ಎಂದು ಜೋಷಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಲಾಗಿತ್ತು ಎಂದು ಪ್ರಲ್ಹಾದ್ ಜೋಷಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ @narendramodi ನರೇಂದ್ರ ಮೋದಿಯವರ ಮಾರ್ಗದರ್ಶನಲ್ಲಿ ಕೇಂದ್ರ ಗಣಿ ಮಂತ್ರಾಲಯದಿಂದ ನಾವು ನಾವು ದಿಟ್ಟ ನಿರ್ಧಾರ ಕೈಗೊಂಡು ಅನುಮೋದನೆ ನೀಡಿದರ ಪರಿಣಾಮವಾಗಿ ಇದೀಗ 2018 ರಿಂದ ನೆನೆಗುದಿಗೆ ಬಿದ್ದಿದ್ದ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮಕ್ಕೆ (NMDC) ಕಬ್ಬಿಣದ ಅದಿರು ಗಣಿಗಾರಿಕೆ ಆರಂಭವಾಗಲಿದೆ. pic.twitter.com/aPSgK5Dt4L
— Pralhad Joshi (@JoshiPralhad) December 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.