ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾವಿನ್ ಟೋಲ್ ಫ್ರೀ ನಂಬರ್ 1800 5724 920 ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು.
ಆನ್ಲೈನ್ ಶಿಕ್ಷಣ- ಕಲಿಕೆಯ ಮಟ್ಟ ಅರಿಯುವ ಅಭಿಯಾನಕ್ಕೆ ಚಾಲನೆ ನೀಡಿ ಸಚಿವ ಸುರೇಶ್ ಕುಮಾರ್ ಮಾತನಾಡಿದರು.
ಕೊರೋನಾ ಸೋಂಕು ಎಲ್ಲಾ ಕ್ಷೇತ್ರಗಳ ಮೇಲೆಯೂ ತನ್ನ ಕರಾಳತೆಯನ್ನು ಪ್ರದರ್ಶಿಸಿದೆ. ಶೈಕ್ಷಣಿಕ ಕ್ಷೇತ್ರ, ಶಾಲೆಗಳ ಮೇಲೆಯೂ ಕೊರೋನಾ ಸೋಂಕಿನಿಂದಾದ ಹಾನಿ ಅಪಾರ. ಇದರಿಂದಾಗಿ ಒಂದು ಕಡೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಿದ್ದರೆ, ಇನ್ನೊಂದು ಕಡೆಯಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿ ಹೆಚ್ಚಾಗಿದೆ ಎಂಬ ಮಾಹಿತಿಯೂ ಲಭಿಸುತ್ತಿದೆ ಎಂದು ಸಚಿವರು ತಿಳಿಸಿದರು.
ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಒಂದು ರೀತಿಯ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಮೂಲಕ ಮಕ್ಕಳಲ್ಲಿ ಕಲಿಕೆಯ ಇಚ್ಛೆಯನ್ನು ಹೆಚ್ಚಿಸಲು ಮುಂದಾಗಿರುವುದಾಗಿಯೂ ಸುರೇಶ್ ಕುಮಾರ್ ನುಡಿದರು.
ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥಾಪಕ ಮತ್ತು ಪ್ರವರ್ತಕ ಕೆ ವಿ ಪ್ರಕಾಶ್, ವಿದ್ಯಾವಿನ್ ಶಿಕ್ಷಣ ಕಾರ್ಯಕ್ರಮದ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳ ಅಂತರವನ್ನು ಸರಿದೂಗಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಆನ್ಲೈನ್ ಶಿಕ್ಷಣ ಯಾವ ಪ್ರಮಾಣದಲ್ಲಿ ತಲುಪಿದೆ ಎಂದು ತಿಳಿದುಕೊಳ್ಳುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನ ಇದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.