ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನ ನಿಧಿಗೆ ಸ್ವಯಂಪ್ರೇರಣೆಯಿಂದ ಕೊಡುಗೆ ನೀಡಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶವಾಸಿಗಳನ್ನು ಕೋರಿದ್ದಾರೆ.
ಸಶಸ್ತ್ರ ಪಡೆಗಳ ಧ್ವಜ ದಿನದ ಹಿನ್ನೆಲೆಯಲ್ಲಿ ವಾಡಿಕೆಯಂತೆ ನವದೆಹಲಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಿಂಗ್, ದೇಶದ ಸಾರ್ವಭೌಮತ್ವವನ್ನು ಕಾಪಾಡಲು ನಮ್ಮ ಪಡೆಗಳು ಯಾವಾಗಲೂ ಶೌರ್ಯದಿಂದ ಹೋರಾಡುತ್ತವೆ. ಈ ಪ್ರಕ್ರಿಯೆಯಲ್ಲಿ, ಕೆಲವೊಮ್ಮೆ ಯೋಧರು ತಮ್ಮ ಪ್ರಾಣವನ್ನು ತ್ಯಜಿಸಿದ್ದಾರೆ, ತಮ್ಮ ಕುಟುಂಬಗಳನ್ನು ಬಿಟ್ಟು ಹೋಗಿದ್ದಾರೆ ಅಥವಾ ದಿವ್ಯಾಂಗರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಆದ್ದರಿಂದ ನಮ್ಮ ಮಾಜಿ ಸೈನಿಕರ ಪುನರ್ವಸತಿ ಮತ್ತು ಕಲ್ಯಾಣ, ನಮ್ಮ ಹುತಾತ್ಮರ ಮತ್ತು ನಮ್ಮ ದಿವ್ಯಾಂಗ ಸೈನಿಕರ ಸಂಬಂಧಿಗಳ ಹೊಣೆ ಎಲ್ಲಾ ನಾಗರಿಕರ ಜವಾಬ್ದಾರಿಯಾಗಿದೆ. ಎಎಫ್ಎಫ್ಡಿ ನಿಧಿಗೆ ಕೊಡುಗೆ ನೀಡುವ ಮೂಲಕ ಈ ಜವಾಬ್ದಾರಿಯನ್ನು ಪೂರೈಸಲು ಧ್ವಜ ದಿನವು ನಮಗೆ ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.
ಜನರ ಸ್ವಯಂಪ್ರೇರಿತ ಕೊಡುಗೆಗಳ ಮೂಲಕ 2019-20ರ ಅವಧಿಯಲ್ಲಿ 47 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ ರಕ್ಷಣಾ ಸಚಿವರು, ದೇಶದ ಜನರು ಈ ವರ್ಷವೂ ಸ್ವಯಂಪ್ರೇರಿತ ಕೊಡುಗೆಗಳ ಮನೋಭಾವವನ್ನು ವ್ಯಕ್ತಪಡಿಸುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಪ್ರತಿ ವರ್ಷ ಡಿಸೆಂಬರ್ 7 ರಂದು ದೇಶಾದ್ಯಂತ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತದೆ. 1949 ರಿಂದ, ಹುತಾತ್ಮರನ್ನು ಮತ್ತು ಸಮವಸ್ತ್ರದಲ್ಲಿರುವ ಧೀರರನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.