ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಚೇರ್ಮನ್ ಒ.ಎಂ ಅಬ್ದುಲ್ ಸಲಾಂ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಎಲಾಮರಂ ಅವರ ಕೇರಳದ ಕಚೇರಿ ಹಾಗೂ ನಿವಾಸಗಳ ಮೇಲೆ ಸೇರಿದಂತೆ 9 ರಾಜ್ಯಗಳಲ್ಲಿ ಏಕಕಾಲಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಸಂಘಟನೆಯ ನಾಯಕರ ಕಚೇರಿ, ಮನೆಗಳ ಮೇಲೆ ಕಳೆದ ಕೆಲವು ದಿನಗಳಿಂದ ED ದಾಳಿ ಮುಂದುವರಿಸಿದ್ದು, ಇಂದು ಕೇರಳದ ಇಬ್ಬರು ನಾಯಕರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದೆ. ಈವರೆಗೆ ಕೇರಳ, ಕರ್ನಾಟಕ ಸೇರಿದಂತೆ ಸುಮಾರು 26 ಸ್ಥಳಗಳಲ್ಲಿ ಏಕಕಾಲಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡುವ ಮೂಲಕ, ಅಕ್ರಮ ಪತ್ತೆ ಹಚ್ಚುವ ತನಿಖೆಯನ್ನು ಚುರುಕು ಮಾಡಿದ್ದಾರೆ.
ವಿದೇಶಗಳಿಂದ ಬಂದ ಪಿಎಫ್ಐಗೆ ಬಂದ ಅಕ್ರಮ ಸಂಪತ್ತಿನ ಬಗ್ಗೆ ಈ ತನಿಖೆ ನಡೆಯುತ್ತಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಇ.ಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ವಿದೇಶದಿಂದ ಆಗಿರುವ ಕೋಟ್ಯಂತರ ಹಣದ ಮೂಲದ ಬಗ್ಗೆ ಮಾಹಿತಿ ತಿಳಿಯುವ ಪ್ರಯತ್ನವನ್ನು ಅಧಿಕಾರಿಗಳು ಈ ತನಿಖೆಯಲ್ಲಿ ಮಾಡುತ್ತಿದ್ದಾರೆ. ಪ್ರತಿಭಟನೆಗಳಿಗೆ ಅಕ್ರಮ ಮೂಲಗಳಿಂದ ಬಂದ ಹಣ ಬಳಕೆಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪ್ರತಿಭಟನೆ ಸಂದರ್ಭದಲ್ಲಿ ಪಿಎಫ್ಐ ಖಾತೆಗಳಿಗೆ 120 ಕೋಟಿ ರೂ. ಜಮೆಯಾಗಿದ್ದು, ಈ ಸಂಶಯಾಸ್ಪದ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.