ಹೈದರಾಬಾದ್: ರಾಜಕೀಯ ವಲಯದಲ್ಲಿ ಭಾರೀ ಕುತೂಹಲವನ್ನು ಕೆರಳಿಸಿರುವ ‘ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್’ (ಜಿಎಚ್ಎಂಸಿ) ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಡಿಸೆಂಬರ್ 1ರಂದು ಜಿಎಚ್ಎಂಸಿಎಯ 150 ವಾರ್ಡ್ಗಳಿಗೆ ಚುನಾವಣೆ ನಡೆದಿತ್ತು. ಕರೋನ ವೈರಸ್ ಕಾರಣದಿಂದಾಗಿ ಮತಪತ್ರಗಳನ್ನು ಬಳಸಿ ಚುನಾವಣೆಯನ್ನು ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಸುಮಾರು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಮತಪ್ರಚಾರದ ಸಂದರ್ಭದಲ್ಲಿ ನಡೆದ ಕೆಲವು ಬೆಳವಣಿಗೆಗಳು ಈ ಚುನಾವಣೆಗೆ ಹೆಚ್ಚಿನ ಪ್ರಚಾರ ಸಿಗುವಂತೆ ಮಾಡಿದೆ. ಹೈದರಾಬಾದ್ ನಗರಕ್ಕೆ ಭಾಗ್ಯನಗರವಾಗಿ ಮರುನಾಮಕರಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆ ನೀಡಿದ್ದರು. ಇದು ಭಾರೀ ಸುದ್ದಿ ಮಾಡಿತ್ತು. ಅಲ್ಲದೇ ಹೈದರಾಬಾದನ್ನು ನಿಜಾಮರ ಸಂಸ್ಕೃತಿಯಿಂದ ಹೊರತಾಗಿ ಬಿಜೆಪಿ ಹೇಳಿದೆ.
ಆಡಳಿತರೂಢ ಟಿಆರ್ಎಸ್, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಅಸಾವುದುದ್ದಿನ್ ಓವೈಸಿಯ ಎಐಎಂಐಎಂ ಕೂಡ ಅಖಾಡದಲ್ಲಿ ಇದೆ.
Telangana: Counting for Greater Hyderabad Municipal Corporation (GHMC) elections underway; visuals from LB Stadium counting centre. #GHMCPolls pic.twitter.com/RP486Dw7xy
— ANI (@ANI) December 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.