ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವುದು ಅಗತ್ಯವಿಲ್ಲ. ಆದರೆ ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಈ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಸಹ ಯಾವುದೇ ಸಲಹೆಗಳನ್ನು ನೀಡಿಲ್ಲ. ಆದ್ದರಿಂದ ನೈಟ್ ಕರ್ಫ್ಯೂ ಹೆರುವ ಬಗ್ಗೆ ಸರ್ಕಾರ ಚಿಂತಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಆದರೆ ಕೊರೋನಾ ತಡೆಯುವ ನಿಟ್ಟಿನಲ್ಲಿ ಕೆಲವೊಂದು ಸಮರ್ಥ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಜನರು ಗುಂಪುಗೂಡುವುದನ್ನು ನಿಯಂತ್ರಣ ಮಾಡುವುದು, ಸಮಾರಂಭಗಳಿಗೆ 100 ಜನ ಮೀರದಂತೆ ಎಚ್ಚರ ವಹಿಸುವುದು, ರಾಜಕೀಯ ಸಮಾರಂಭಗಳಿಗೆ 200 ಜನ ಮೀರದಂತೆ ಕ್ರಮ ಕೈಗೊಳ್ಳುವುದು, ಸಾವಿನ ಸಂದರ್ಭದಲ್ಲಿ 50 ಜನರಿಗೆ ಭಾಗವಹಿಸುವುದಕ್ಕೆ ಅವಕಾಶ ನೀಡುವುದು ಮೊದಲಾದಂತೆ ಇನ್ನೂ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಡಿ. 20 ರಿಂದ ಮುಂದಿನ ಜ. 2 ರ ವರೆಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.