ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆ ಕೆಲವೇ ವಾರಗಳಲ್ಲಿ ಸಿದ್ಧವಾಗಲಿದೆ ಎಂಬ ಬಗ್ಗೆ ಭಾರತೀಯ ವಿಜ್ಞಾನಿಗಳು ಬಹಳ ವಿಶ್ವಾಸ ಹೊಂದಿದ್ದಾರೆ. ವಿಜ್ಞಾನಿಗಳಿಂದ ಹಸಿರು ನಿಶಾನೆ ಸಿಕ್ಕ ಕೂಡಲೇ ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ.
“ನಮ್ಮ ವಿಜ್ಞಾನಿಗಳು ಕೋವಿಡ್-19 ಲಸಿಕೆ ತಯಾರಿಸುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸವಿದೆ. ಜಗತ್ತು ಅಗ್ಗದ ಮತ್ತು ಸುರಕ್ಷಿತ ಲಸಿಕೆ ಬಗ್ಗೆ ನಿಗಾ ಇಡುತ್ತಿದೆ. ಅದಕ್ಕಾಗಿಯೇ ಜಗತ್ತು ಭಾರತವನ್ನು ನೋಡುತ್ತಿದೆ. ಕೋವಿಡ್ ಲಸಿಕೆ ಪಡೆಯುವವರು ಮುಂಚೂಣಿಯ ಆರೋಗ್ಯ ಕಾರ್ಯಕರ್ತರು, ವೃದ್ಧರು ಮತ್ತು ಮಾರಣಾಂತಿಕ ಲಕ್ಷಣಗಳು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರು ಆಗಿರಲಿದ್ದಾರೆ”ಎಂದಿದ್ದಾರೆ.
ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ದೇಶವು ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿದೆ ಎಂದು ಮೋದಿ ಭರವಸೆ ನೀಡಿದ್ದಾರೆ. “ಲಸಿಕೆ ವಿತರಣೆ ಮತ್ತು ನಿರ್ವಹಣೆಯನ್ನು ರಾಷ್ಟ್ರೀಯ ತಜ್ಞರ ಗುಂಪಿಗೆ ನೀಡಲಾಗುತ್ತದೆ. ಅವರಿಂದ ಸಮಗ್ರ ಮತ್ತು ನೈಜ ಸಮಯದಲ್ಲಿ ಸಲಹೆಗಳನ್ನು ತೆಗೆದುಕೊಳ್ಳಲಾಗುವುದು. ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಅಗತ್ಯವಾದ ಸೌಲಭ್ಯಗಳನ್ನು ಭಾರತ ಹೊಂದಿದೆ. ವಾಸ್ತವವಾಗಿ, ನಮ್ಮ ತಯಾರಿ ಇತರರಿಗಿಂತ ಉತ್ತಮವಾಗಿದೆ “ಎಂದು ಪಿಎಂ ಮೋದಿ ಸಭೆಯಲ್ಲಿ ಹೇಳಿದ್ದಾರೆ.
ಇದು ಈ ವಿಷಯದ ಬಗ್ಗೆ ಸರ್ಕಾರ ನಡೆಸಿದ ಎರಡನೇ ಸಭೆಯಾಗಿದೆ.
“ಲಸಿಕೆ ಬೆಲೆಯ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಮೊದಲ ಆದ್ಯತೆಯಾಗಿ ಇಟ್ಟುಕೊಂಡು ಬೆಲೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.