ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ಗೆ ಕರೆ ನೀಡಿದ್ದು, ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು, ಚಾಮರಾಜನಗರ ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕರ್ತರು ಬಂದ್, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮುಂಜಾನೆ 6 ಗಂಟೆಯಿಂದಲೇ ಬಂದ್ ಆರಂಭವಾಗಿದ್ದು, ಕೆಲವು ಬಸ್ಸುಗಳಿಗೆ ಕಲ್ಲು ತೂರಾಟ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಾತ್ರ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗದಗ್ನಲ್ಲಿ ಪ್ರತಿಕೃತಿ ದಹನ, ಕೊಪ್ಪಳದಲ್ಲಿಯೂ ಕನ್ನಡ ಸಂಘಗಳ ಬಂದ್ ಕೊಂಚ ಸದ್ದು ಮಾಡಿದೆ. ಇನ್ನು ಬೆಂಗಳೂರಿನ ಟೌನ್ಹಾಲ್ ಬಳಿಯಲ್ಲಿ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದಲ್ಲಿಯೂ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಬಂದ್ಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲವೆಗೆ ಸುಮಾರು 15 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಶಾಂತಿಯುತವಾಗಿ ಫ್ರತಿಭಟನೆ ನಡೆಸುವಂತೆಯೂ ಬಂದ್ ಮಾಡುವವರಿಗೆ ಎಚ್ಚರಿಕೆ ನೀಡಲಾಗಿದೆ. ಅದರೊಂದಿಗೆ ಬಲತ್ಕಾರದ ಬಂದ್ಗೆ ಮುಂದಾಗದಂತೆಯೂ ಈ ಮೊದಲೇ ಸೂಚಿಸಲಾಗಿದೆ.
ಈ ಬಂದ್ಗೆ ಸಂಬಂಧಿಸಿದಂತೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಬಂದ್ ಆಯೋಜಿಸುವವರೇ ನೇರ ಹೊಣೆ ಎಂದು ರಾಜ್ಯ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅದರೊಂದಿಗೆ ಕೊರೋನಾ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಬಂದ್ನಲ್ಲಿ ಭಾಗವಹಿಸುವವರ ವಿರುದ್ಧ ಕಠಿಣ ಕ್ರಮ ವಹಿಸುವಂತೆಯೂ ಹೈಕೋರ್ಟ್ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.