ನವದೆಹಲಿ: ಸುಧಾರಣೆ, ಕಾರ್ಯ ಮತ್ತು ಪರಿವರ್ತನೆ ತತ್ವಕ್ಕೆ ತಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ 2020 ಜಾಗತಿಕ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿದ ಪ್ರಧಾನಿ, “ನಮ್ಮ ಸರ್ಕಾರ ಸುಧಾರಣೆ, ಕಾರ್ಯ ಮತ್ತು ಪರಿವರ್ತನೆಯ ತತ್ವಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ. ಎಲ್ಲಾ ವಲಯವನ್ನು ಸುಧಾರಣೆಗೊಳಿಸದೆ ನಾವು ಬಿಡುವುದಿಲ್ಲ” ಎಂದಿದ್ದಾರೆ.
ಭಾರತವು ಕಾರ್ಯನಿರ್ವಹಿಸುವ ವಿಧಾನದಿಂದಾಗಿ ವಿಶಾಲ ಬದಲಾವಣೆಗೆ ಸಾಕ್ಷಿಯಾಗಿದೆ ಎಂದಿರುವ ಅವರು, “ಎಂದಿಗೂ ಸಂಭವಿಸುವುದಿಲ್ಲ ಎಂದು ಭಾವಿಸಲಾಗಿದ್ದ ವಿಷಯಗಳನ್ನು ನಾವು ಮಾಡಿ ತೋರಿಸಿದ್ದೇವೆ” ಎಂದಿದ್ದಾರೆ.
“ನಾವು ಏಷ್ಯಾ ಮತ್ತು ಯುರೋಪಿನ ವಿವಿಧ ದೇಶಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ನಮ್ಮ ಯುವಕರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಜಾಗತಿಕವಾಗಿ ಉತ್ತಮ ಅಭ್ಯಾಸಗಳಿಂದ ಕಲಿಯಲು ಅಂತರರಾಷ್ಟ್ರೀಯ ವೇದಿಕೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಉದ್ದೇಶ” ಎಂದು ಪ್ರಧಾನಿ ಹೇಳಿದ್ದಾರೆ.
75ನೇ ವರ್ಷದ ಸ್ವಾತಂತ್ರ್ಯವನ್ನು ಹೇಗೆ ಗುರುತಿಸಬಹುದು ಎಂಬುದರ ಕುರಿತು ಪ್ರತಿಯೊಬ್ಬರೂ ತಮ್ಮ ಆಲೋಚನೆಗಳು ಮತ್ತು ಒಳಹರಿವುಗಳನ್ನು ಹಂಚಿಕೊಳ್ಳಬೇಕೆಂದು ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ. “ನಿಮ್ಮ ಅಭಿಪ್ರಾಯಗಳನ್ನು ನೀವು http://mygov.in ಮೂಲಕ ಅಥವಾ ನೇರವಾಗಿ ನನ್ನೊಂದಿಗೆ ನರೇಂದ್ರ ಮೋದಿ ಆ್ಯಪ್ನಲ್ಲಿ ಹಂಚಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.