ಬೆಂಗಳೂರು: ಕೊರೋನಾ ಸೋಂಕಿನ ಸಮರ್ಥ ನಿರ್ವಹಣೆ, ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 3W (ವಾಷ್, ವೇರ್, ವಾಚ್) ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಗೌತಮ್ ಗುಪ್ತ, ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಗೌರವ್ ಗುಪ್ತ, ಕೊರೋನಾ ಪರಿಸ್ಥಿತಿಯನ್ನು ಸಾಮಾನ್ಯ ಎಂದು ಪರಿಗಣಿಸಬಾರದು. ಆ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಸರಿಯಾಗಿ ಪಾಲನೆ ಮಾಡಲೇ ಬೇಕಿದೆ. ಕೊರೋನಾ ಸರಳ ವಿಚಾರವಲ್ಲ. ಇದು ದಿನಕಳೆದಂತೆ ವಿಶ್ವದಲ್ಲಿ ತನ್ನ ವ್ಯಾಪಕತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಕೊರೋನಾ ಎರಡನೇ ಅಲೆ ಆರಂಭವಾದದ್ದೇ ಆದಲ್ಲಿ ಆರೋಗ್ಯ, ಆರ್ಥಿಕತೆಗಳೆರಡರ ಮೇಲೆಯೂ ಅಡ್ಡ ಪರಿಣಾಮ ಬೀರಲಿದೆ. ಆದ್ದರಿಂದ 3ಡಬ್ಲ್ಯೂ ಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.
ಕೊರೋನಾ ನಿಯಂತ್ರಣ ಸೂತ್ರಗಳನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳುವುದು ಮತ್ತು ಅದರ ಸರಿಯಾದ ಅನುಸರಣೆಯಿಂದ ಮಾತ್ರವೇ ಕೊರೋನಾ ಸಂಕಷ್ಟ ತಡೆಗಟ್ಟಲು ಸಾಧ್ಯ. ಲಸಿಕೆ ಲಭ್ಯವಾಗುವವರೆಗೂ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು ಮತ್ತು ಆ ಬಗ್ಗೆ ಜನಜಾಗೃತಿ ಮೂಡಿಸುವುದು ತೀರಾ ಅಗತ್ಯ ಎಂದು ಗೌರವ್ ಗುಪ್ತ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.