ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಚಿಂತಪಲ್ಲೆ ಪ್ರದೇಶದಲ್ಲಿ ಶನಿವಾರ 12 ಮಂದಿ ಸಕ್ರಿಯ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.
ನಕ್ಸಲ್ ಸದಸ್ಯರುಗಳು ಚಿಂತಪಲ್ಲೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವಿದ್ಯಾ ಸಾಗರ್ ನಾಯ್ಡು ಅವರ ಮುಂದೆ ಶರಣಾದರು. ಇವರುಗಳು ಗಲಿಕೊಂಡ ಪ್ರದೇಶದ ಪತ್ರುಡಿಗುಂಟ, ಪನಸಲಬಂದ, ಅಕುಲೂರು ಮತ್ತು ರಾಮಗಡ್ಡ ಗ್ರಾಮಗಳಿಗೆ ಸೇರಿದವರು ಎನ್ನಲಾಗಿದೆ.
ಶರಣಾಗತಿಯ ಬಗ್ಗೆ ಮಾಹಿತಿ ನೀಡಿದ ನಾಯ್ಡು, “ಮಾವೋವಾದಿಗಳ ಅನಾಗರಿಕ ಕೃತ್ಯಗಳಿಂದ ಜನರು ಬೇಸರಗೊಂಡಿದ್ದಾರೆ. ಇವರುಗಳು ಜನರನ್ನು ಪೊಲೀಸ್ ಮಾಹಿತಿದಾರರು ಎಂದು ಹೇಳಿ ಹಿಂಸೆ ನೀಡುತ್ತಿದ್ದರು ಮತ್ತು ಉಹಾಪೋಹಗಳ ಆಧಾರದ ಮೇಲೆ ಅವರನ್ನು ಕೊಲ್ಲುತ್ತಿದ್ದರು” ಎಂದಿದ್ದಾರೆ.
ಶರಣಾದ ನಕ್ಸಲರಿಗೆ ಉತ್ತಮ ಜೀವನ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.