ನವದೆಹಲಿ: ಆಯುಷ್ ರಫ್ತು ಹೆಚ್ಚಿಸುವ ಸಲುವಾಗಿ ರಫ್ತು ಉತ್ತೇಜನ ಮಂಡಳಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯ, ಕೈಗಾರಿಕೆ ಮತ್ತು ಆಯುಷ್ ಸಚಿವಾಲಯಗಳು ಒಟ್ಟಾಗಿ ಕೆಲಸ ಮಾಡಲಿವೆ.
ಆಯುಷ್ ವ್ಯಾಪಾರ ಮತ್ತು ಉದ್ಯಮದ ಪರಿಶೀಲನಾ ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಆಯುಷ್ ಸಚಿವ ಶ್ರೀಪಾದ್ ನಾಯಕ್ ಈ ನಿರ್ಧಾರ ಕೈಗೊಂಡಿದ್ದಾರೆ.
ರಫ್ತು ಹೆಚ್ಚಿಸಲು, ಬೆಲೆ ಮತ್ತು ಗುಣಮಟ್ಟದ ಸ್ಪರ್ಧಾತ್ಮಕತೆಯನ್ನು ಸಾಧಿಸಲು ಇಡೀ ಆಯುಷ್ ವಲಯವು ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಈ ವಿಮರ್ಶೆ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.
ಇದರಲ್ಲಿ ಆಯುಷ್ ವಲಯದ ಸುಮಾರು 50 ಉದ್ಯಮ ಮತ್ತು ವ್ಯಾಪಾರ ಮುಖಂಡರು ಭಾಗವಹಿಸಿದ್ದರು.
ಆಯುಷ್ ವಲಯದ 2000 ಕ್ಕೂ ಹೆಚ್ಚು ಪಾಲುದಾರರು ವರ್ಚುವಲ್ ಪ್ಲಾಟ್ಫಾರ್ಮ್ಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಇ-ಈವೆಂಟ್ಗೆ ಹಾಜರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.